ನನ್ನ ಭೂಮಿ ಅಭಿಯಾನ ಜಾರಿಯಿಂದ ರೈತರಿಗೆ ಅನುಕೂಲ

January 25, 2025
7:00 AM
ನನ್ನ ಭೂಮಿ’ ಅಭಿಯಾನದಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನ ಈಗಾಗಲೇ ಚಾಲನೆಗೊಂಡಿದೆ.

ರಾಜ್ಯದಲ್ಲಿ ಪೋಡಿ ದುರಸ್ತಿಯಾಗಿ ರೈತರು ಸರ್ಕಾರಿ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ’ನನ್ನ ಭೂಮಿ ಅಭಿಯಾನ’ ನಡೆಸಲಾಗುತ್ತಿದ್ದು,  ಜಮೀನಿನ ಮಾಲೀಕತ್ವಕ್ಕೆ ರಾಜ್ಯ ಸರ್ಕಾರ ಅನುವು ಮಾಡಿಕೊಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದಲ್ಲಿ ಕಂದಾಯ ಇಲಾಖೆ ಮತ್ತು ಭೂ ಮಾಪನ ಇಲಾಖೆಯಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನಕ್ಕೆ ಮತ್ತು ಪೋಡಿ ದುರಸ್ತಿ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ’ನನ್ನ ಭೂಮಿ’ ಅಭಿಯಾನದಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನ ಈಗಾಗಲೇ ಚಾಲನೆಗೊಂಡಿದ್ದು, ದಶಕಗಳಿಂದ ಆಗದಿರುವ ಪೋಡಿ ದುರಸ್ತಿ ವಿತರಣೆ ವೇಗವಾಗಿ ನಡೆಯಲು ಅಭಿಯಾನ ಸಹಕಾರಿಯಾಗಿದೆ ಎಂದು ತಿಳಿಸಿದರು. ದಶಕಗಳಿಂದ ರೈತರು ತಮ್ಮ ಜಮೀನಿಗೆ ಸಂಪೂರ್ಣ ಮಾಲಿಕತ್ವ ಸಿಗದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾಗಿದೆ. ರಾಜ್ಯದಲ್ಲಿ 15 ಲಕ್ಷ ಇಂತಹ ಪ್ರಕರಣಗಳಲ್ಲಿ ರೈತರಿಗೆ ಇನ್ನು ಮಾಲೀಕತ್ವ ಸಿಕ್ಕಿಲ್ಲ. ಇದನ್ನು ಮನಗಂಡಿರುವ ರಾಜ್ಯ ಸರ್ಕಾರ  ಪೋಡಿ ಅಭಿಯಾನವನ್ನು ಸರಳೀಕೃತಗೊಳಿಸಿ, ಡಿಜಿಟಲೀಕರಣ ಮಾಡಿ ಕಳೆದ ಡಿಸೆಂಬರ್‌ನಿಂದ ಅನುಷ್ಟಾನಗೊಳಿಸಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror