ರಾಜ್ಯದಲ್ಲಿ ಪೋಡಿ ದುರಸ್ತಿಯಾಗಿ ರೈತರು ಸರ್ಕಾರಿ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ’ನನ್ನ ಭೂಮಿ ಅಭಿಯಾನ’ ನಡೆಸಲಾಗುತ್ತಿದ್ದು, ಜಮೀನಿನ ಮಾಲೀಕತ್ವಕ್ಕೆ ರಾಜ್ಯ ಸರ್ಕಾರ ಅನುವು ಮಾಡಿಕೊಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದಲ್ಲಿ ಕಂದಾಯ ಇಲಾಖೆ ಮತ್ತು ಭೂ ಮಾಪನ ಇಲಾಖೆಯಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನಕ್ಕೆ ಮತ್ತು ಪೋಡಿ ದುರಸ್ತಿ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ’ನನ್ನ ಭೂಮಿ’ ಅಭಿಯಾನದಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನ ಈಗಾಗಲೇ ಚಾಲನೆಗೊಂಡಿದ್ದು, ದಶಕಗಳಿಂದ ಆಗದಿರುವ ಪೋಡಿ ದುರಸ್ತಿ ವಿತರಣೆ ವೇಗವಾಗಿ ನಡೆಯಲು ಅಭಿಯಾನ ಸಹಕಾರಿಯಾಗಿದೆ ಎಂದು ತಿಳಿಸಿದರು. ದಶಕಗಳಿಂದ ರೈತರು ತಮ್ಮ ಜಮೀನಿಗೆ ಸಂಪೂರ್ಣ ಮಾಲಿಕತ್ವ ಸಿಗದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾಗಿದೆ. ರಾಜ್ಯದಲ್ಲಿ 15 ಲಕ್ಷ ಇಂತಹ ಪ್ರಕರಣಗಳಲ್ಲಿ ರೈತರಿಗೆ ಇನ್ನು ಮಾಲೀಕತ್ವ ಸಿಕ್ಕಿಲ್ಲ. ಇದನ್ನು ಮನಗಂಡಿರುವ ರಾಜ್ಯ ಸರ್ಕಾರ ಪೋಡಿ ಅಭಿಯಾನವನ್ನು ಸರಳೀಕೃತಗೊಳಿಸಿ, ಡಿಜಿಟಲೀಕರಣ ಮಾಡಿ ಕಳೆದ ಡಿಸೆಂಬರ್ನಿಂದ ಅನುಷ್ಟಾನಗೊಳಿಸಿದೆ ಎಂದರು.
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…