ರಾಜ್ಯದಲ್ಲಿ ಪೋಡಿ ದುರಸ್ತಿಯಾಗಿ ರೈತರು ಸರ್ಕಾರಿ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ’ನನ್ನ ಭೂಮಿ ಅಭಿಯಾನ’ ನಡೆಸಲಾಗುತ್ತಿದ್ದು, ಜಮೀನಿನ ಮಾಲೀಕತ್ವಕ್ಕೆ ರಾಜ್ಯ ಸರ್ಕಾರ ಅನುವು ಮಾಡಿಕೊಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದಲ್ಲಿ ಕಂದಾಯ ಇಲಾಖೆ ಮತ್ತು ಭೂ ಮಾಪನ ಇಲಾಖೆಯಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನಕ್ಕೆ ಮತ್ತು ಪೋಡಿ ದುರಸ್ತಿ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ’ನನ್ನ ಭೂಮಿ’ ಅಭಿಯಾನದಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನ ಈಗಾಗಲೇ ಚಾಲನೆಗೊಂಡಿದ್ದು, ದಶಕಗಳಿಂದ ಆಗದಿರುವ ಪೋಡಿ ದುರಸ್ತಿ ವಿತರಣೆ ವೇಗವಾಗಿ ನಡೆಯಲು ಅಭಿಯಾನ ಸಹಕಾರಿಯಾಗಿದೆ ಎಂದು ತಿಳಿಸಿದರು. ದಶಕಗಳಿಂದ ರೈತರು ತಮ್ಮ ಜಮೀನಿಗೆ ಸಂಪೂರ್ಣ ಮಾಲಿಕತ್ವ ಸಿಗದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾಗಿದೆ. ರಾಜ್ಯದಲ್ಲಿ 15 ಲಕ್ಷ ಇಂತಹ ಪ್ರಕರಣಗಳಲ್ಲಿ ರೈತರಿಗೆ ಇನ್ನು ಮಾಲೀಕತ್ವ ಸಿಕ್ಕಿಲ್ಲ. ಇದನ್ನು ಮನಗಂಡಿರುವ ರಾಜ್ಯ ಸರ್ಕಾರ ಪೋಡಿ ಅಭಿಯಾನವನ್ನು ಸರಳೀಕೃತಗೊಳಿಸಿ, ಡಿಜಿಟಲೀಕರಣ ಮಾಡಿ ಕಳೆದ ಡಿಸೆಂಬರ್ನಿಂದ ಅನುಷ್ಟಾನಗೊಳಿಸಿದೆ ಎಂದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…