ರಾಜ್ಯದಲ್ಲಿ ಪೋಡಿ ದುರಸ್ತಿಯಾಗಿ ರೈತರು ಸರ್ಕಾರಿ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ’ನನ್ನ ಭೂಮಿ ಅಭಿಯಾನ’ ನಡೆಸಲಾಗುತ್ತಿದ್ದು, ಜಮೀನಿನ ಮಾಲೀಕತ್ವಕ್ಕೆ ರಾಜ್ಯ ಸರ್ಕಾರ ಅನುವು ಮಾಡಿಕೊಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದಲ್ಲಿ ಕಂದಾಯ ಇಲಾಖೆ ಮತ್ತು ಭೂ ಮಾಪನ ಇಲಾಖೆಯಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನಕ್ಕೆ ಮತ್ತು ಪೋಡಿ ದುರಸ್ತಿ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ’ನನ್ನ ಭೂಮಿ’ ಅಭಿಯಾನದಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನ ಈಗಾಗಲೇ ಚಾಲನೆಗೊಂಡಿದ್ದು, ದಶಕಗಳಿಂದ ಆಗದಿರುವ ಪೋಡಿ ದುರಸ್ತಿ ವಿತರಣೆ ವೇಗವಾಗಿ ನಡೆಯಲು ಅಭಿಯಾನ ಸಹಕಾರಿಯಾಗಿದೆ ಎಂದು ತಿಳಿಸಿದರು. ದಶಕಗಳಿಂದ ರೈತರು ತಮ್ಮ ಜಮೀನಿಗೆ ಸಂಪೂರ್ಣ ಮಾಲಿಕತ್ವ ಸಿಗದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾಗಿದೆ. ರಾಜ್ಯದಲ್ಲಿ 15 ಲಕ್ಷ ಇಂತಹ ಪ್ರಕರಣಗಳಲ್ಲಿ ರೈತರಿಗೆ ಇನ್ನು ಮಾಲೀಕತ್ವ ಸಿಕ್ಕಿಲ್ಲ. ಇದನ್ನು ಮನಗಂಡಿರುವ ರಾಜ್ಯ ಸರ್ಕಾರ ಪೋಡಿ ಅಭಿಯಾನವನ್ನು ಸರಳೀಕೃತಗೊಳಿಸಿ, ಡಿಜಿಟಲೀಕರಣ ಮಾಡಿ ಕಳೆದ ಡಿಸೆಂಬರ್ನಿಂದ ಅನುಷ್ಟಾನಗೊಳಿಸಿದೆ ಎಂದರು.
ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…
ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…
ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…
ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…
ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…
ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…