ರಾಜ್ಯದಲ್ಲಿ ಪೋಡಿ ದುರಸ್ತಿಯಾಗಿ ರೈತರು ಸರ್ಕಾರಿ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ’ನನ್ನ ಭೂಮಿ ಅಭಿಯಾನ’ ನಡೆಸಲಾಗುತ್ತಿದ್ದು, ಜಮೀನಿನ ಮಾಲೀಕತ್ವಕ್ಕೆ ರಾಜ್ಯ ಸರ್ಕಾರ ಅನುವು ಮಾಡಿಕೊಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದಲ್ಲಿ ಕಂದಾಯ ಇಲಾಖೆ ಮತ್ತು ಭೂ ಮಾಪನ ಇಲಾಖೆಯಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನಕ್ಕೆ ಮತ್ತು ಪೋಡಿ ದುರಸ್ತಿ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ’ನನ್ನ ಭೂಮಿ’ ಅಭಿಯಾನದಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನ ಈಗಾಗಲೇ ಚಾಲನೆಗೊಂಡಿದ್ದು, ದಶಕಗಳಿಂದ ಆಗದಿರುವ ಪೋಡಿ ದುರಸ್ತಿ ವಿತರಣೆ ವೇಗವಾಗಿ ನಡೆಯಲು ಅಭಿಯಾನ ಸಹಕಾರಿಯಾಗಿದೆ ಎಂದು ತಿಳಿಸಿದರು. ದಶಕಗಳಿಂದ ರೈತರು ತಮ್ಮ ಜಮೀನಿಗೆ ಸಂಪೂರ್ಣ ಮಾಲಿಕತ್ವ ಸಿಗದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾಗಿದೆ. ರಾಜ್ಯದಲ್ಲಿ 15 ಲಕ್ಷ ಇಂತಹ ಪ್ರಕರಣಗಳಲ್ಲಿ ರೈತರಿಗೆ ಇನ್ನು ಮಾಲೀಕತ್ವ ಸಿಕ್ಕಿಲ್ಲ. ಇದನ್ನು ಮನಗಂಡಿರುವ ರಾಜ್ಯ ಸರ್ಕಾರ ಪೋಡಿ ಅಭಿಯಾನವನ್ನು ಸರಳೀಕೃತಗೊಳಿಸಿ, ಡಿಜಿಟಲೀಕರಣ ಮಾಡಿ ಕಳೆದ ಡಿಸೆಂಬರ್ನಿಂದ ಅನುಷ್ಟಾನಗೊಳಿಸಿದೆ ಎಂದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…