Advertisement
ಸುದ್ದಿಗಳು

ನನ್ನ ಭೂಮಿ ಅಭಿಯಾನ ಜಾರಿಯಿಂದ ರೈತರಿಗೆ ಅನುಕೂಲ

Share

ರಾಜ್ಯದಲ್ಲಿ ಪೋಡಿ ದುರಸ್ತಿಯಾಗಿ ರೈತರು ಸರ್ಕಾರಿ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ’ನನ್ನ ಭೂಮಿ ಅಭಿಯಾನ’ ನಡೆಸಲಾಗುತ್ತಿದ್ದು,  ಜಮೀನಿನ ಮಾಲೀಕತ್ವಕ್ಕೆ ರಾಜ್ಯ ಸರ್ಕಾರ ಅನುವು ಮಾಡಿಕೊಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದಲ್ಲಿ ಕಂದಾಯ ಇಲಾಖೆ ಮತ್ತು ಭೂ ಮಾಪನ ಇಲಾಖೆಯಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನಕ್ಕೆ ಮತ್ತು ಪೋಡಿ ದುರಸ್ತಿ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ’ನನ್ನ ಭೂಮಿ’ ಅಭಿಯಾನದಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನ ಈಗಾಗಲೇ ಚಾಲನೆಗೊಂಡಿದ್ದು, ದಶಕಗಳಿಂದ ಆಗದಿರುವ ಪೋಡಿ ದುರಸ್ತಿ ವಿತರಣೆ ವೇಗವಾಗಿ ನಡೆಯಲು ಅಭಿಯಾನ ಸಹಕಾರಿಯಾಗಿದೆ ಎಂದು ತಿಳಿಸಿದರು. ದಶಕಗಳಿಂದ ರೈತರು ತಮ್ಮ ಜಮೀನಿಗೆ ಸಂಪೂರ್ಣ ಮಾಲಿಕತ್ವ ಸಿಗದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾಗಿದೆ. ರಾಜ್ಯದಲ್ಲಿ 15 ಲಕ್ಷ ಇಂತಹ ಪ್ರಕರಣಗಳಲ್ಲಿ ರೈತರಿಗೆ ಇನ್ನು ಮಾಲೀಕತ್ವ ಸಿಕ್ಕಿಲ್ಲ. ಇದನ್ನು ಮನಗಂಡಿರುವ ರಾಜ್ಯ ಸರ್ಕಾರ  ಪೋಡಿ ಅಭಿಯಾನವನ್ನು ಸರಳೀಕೃತಗೊಳಿಸಿ, ಡಿಜಿಟಲೀಕರಣ ಮಾಡಿ ಕಳೆದ ಡಿಸೆಂಬರ್‌ನಿಂದ ಅನುಷ್ಟಾನಗೊಳಿಸಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

6 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

23 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago