ಸುಬ್ರಹ್ಮಣ್ಯ | ಮನೆಗೆ ಗುಡ್ಡ ಕುಸಿತ | ಮುಂದುವರಿದ ಕಾರ್ಯಾಚರಣೆ | ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು ದುರ್ಮರಣ |

August 1, 2022
11:07 PM

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನಲ್ಲಿ ಮೇಘಸ್ಫೋಟ ಸಂಭವಿಸಿದೆ. ಕೆಲವೇ ತಾಸಿನಲ್ಲಿ ಭಾರೀ ಮಳೆಯಾಗಿ ದುರಂತ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿದ್ದು ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ನಡೆಯುತ್ತಿದೆ. ಸದ್ಯ ಮಳೆಯ ಅಬ್ಬರ ಕಡಿಮೆಯಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಮಕ್ಕಳು ದುರಂತದಲ್ಲಿ ಮೃತಪಟ್ಟಿರುವುದು ಖಚಿತವಾಗಿದೆ. 

Advertisement

ಸುಮಾರು ಮೂರು ತಾಸುಗಳ ನಿರಂತರವಾದ ಧಾರಾಕಾರ ಮಳೆಗೆ  ಕುಮಾರಧಾರಾ ಬಳಿಯ ಪರ್ವತಮುಖಿ ಎಂಬಲ್ಲಿ ಮೂಲತಃ ಪಂಜದ ಕರಿಮಜಲು ಕುಶಾಲಪ್ಪ / ಕುಸುಮಾಧರ ಎಂಬವರ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಅವರ ಇಬ್ಬರು ಮಕ್ಕಳಾದ ಶ್ರುತಿ (11) ಹಾಗೂ ಜ್ಞಾನ ಶ್ರೀ (6) ಮಣ್ಣಿನಡಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಚರಣೆ ನಡೆದಿದೆ. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ಮಾಡುವ ಕಾರ್ಯ ನಡೆದಿದೆ. ಮನೆಯಲ್ಲಿ 5 ಜನರಿದ್ದರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಗುಡ್ಡ ಕುಸಿತದ ವೇಳೆ ಮೂರು ಮಂದಿ ಹೊರಗೆ ಓಡಿ ಬಂದಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದರು. ಸತತ ಪ್ರಯತ್ನ ಬಳಿಕ ಮಣ್ಣು ತೆರವು ಕಾರ್ಯ ನಡೆದ ಬಳಿಕ ಮಣ್ಣಿನಡಿ ಸಿಲುಕಿರುವ ಇಬ್ಬರು ಮಕ್ಕಳು ಮೃತಪಟ್ಟಿರುವುದು ಖಚಿತವಾಗಿದೆ.

 

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್
July 7, 2025
11:04 PM
by: ದ ರೂರಲ್ ಮಿರರ್.ಕಾಂ
ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್
July 7, 2025
9:25 PM
by: ದ ರೂರಲ್ ಮಿರರ್.ಕಾಂ
ಮೆಕ್ಕೆಜೋಳ ಸಮಾವೇಶ | ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆ
July 7, 2025
9:17 PM
by: The Rural Mirror ಸುದ್ದಿಜಾಲ
ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ
July 7, 2025
8:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group