ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನಲ್ಲಿ ಮೇಘಸ್ಫೋಟ ಸಂಭವಿಸಿದೆ. ಕೆಲವೇ ತಾಸಿನಲ್ಲಿ ಭಾರೀ ಮಳೆಯಾಗಿ ದುರಂತ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿದ್ದು ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ನಡೆಯುತ್ತಿದೆ. ಸದ್ಯ ಮಳೆಯ ಅಬ್ಬರ ಕಡಿಮೆಯಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಮಕ್ಕಳು ದುರಂತದಲ್ಲಿ ಮೃತಪಟ್ಟಿರುವುದು ಖಚಿತವಾಗಿದೆ.
ಸುಮಾರು ಮೂರು ತಾಸುಗಳ ನಿರಂತರವಾದ ಧಾರಾಕಾರ ಮಳೆಗೆ ಕುಮಾರಧಾರಾ ಬಳಿಯ ಪರ್ವತಮುಖಿ ಎಂಬಲ್ಲಿ ಮೂಲತಃ ಪಂಜದ ಕರಿಮಜಲು ಕುಶಾಲಪ್ಪ / ಕುಸುಮಾಧರ ಎಂಬವರ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಅವರ ಇಬ್ಬರು ಮಕ್ಕಳಾದ ಶ್ರುತಿ (11) ಹಾಗೂ ಜ್ಞಾನ ಶ್ರೀ (6) ಮಣ್ಣಿನಡಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಚರಣೆ ನಡೆದಿದೆ. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ಮಾಡುವ ಕಾರ್ಯ ನಡೆದಿದೆ. ಮನೆಯಲ್ಲಿ 5 ಜನರಿದ್ದರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಗುಡ್ಡ ಕುಸಿತದ ವೇಳೆ ಮೂರು ಮಂದಿ ಹೊರಗೆ ಓಡಿ ಬಂದಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದರು. ಸತತ ಪ್ರಯತ್ನ ಬಳಿಕ ಮಣ್ಣು ತೆರವು ಕಾರ್ಯ ನಡೆದ ಬಳಿಕ ಮಣ್ಣಿನಡಿ ಸಿಲುಕಿರುವ ಇಬ್ಬರು ಮಕ್ಕಳು ಮೃತಪಟ್ಟಿರುವುದು ಖಚಿತವಾಗಿದೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…