ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನಲ್ಲಿ ಮೇಘಸ್ಫೋಟ ಸಂಭವಿಸಿದೆ. ಕೆಲವೇ ತಾಸಿನಲ್ಲಿ ಭಾರೀ ಮಳೆಯಾಗಿ ದುರಂತ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿದ್ದು ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯ ನಡೆಯುತ್ತಿದೆ. ಸದ್ಯ ಮಳೆಯ ಅಬ್ಬರ ಕಡಿಮೆಯಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಮಕ್ಕಳು ದುರಂತದಲ್ಲಿ ಮೃತಪಟ್ಟಿರುವುದು ಖಚಿತವಾಗಿದೆ.
ಸುಮಾರು ಮೂರು ತಾಸುಗಳ ನಿರಂತರವಾದ ಧಾರಾಕಾರ ಮಳೆಗೆ ಕುಮಾರಧಾರಾ ಬಳಿಯ ಪರ್ವತಮುಖಿ ಎಂಬಲ್ಲಿ ಮೂಲತಃ ಪಂಜದ ಕರಿಮಜಲು ಕುಶಾಲಪ್ಪ / ಕುಸುಮಾಧರ ಎಂಬವರ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಅವರ ಇಬ್ಬರು ಮಕ್ಕಳಾದ ಶ್ರುತಿ (11) ಹಾಗೂ ಜ್ಞಾನ ಶ್ರೀ (6) ಮಣ್ಣಿನಡಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಚರಣೆ ನಡೆದಿದೆ. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ಮಾಡುವ ಕಾರ್ಯ ನಡೆದಿದೆ. ಮನೆಯಲ್ಲಿ 5 ಜನರಿದ್ದರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಗುಡ್ಡ ಕುಸಿತದ ವೇಳೆ ಮೂರು ಮಂದಿ ಹೊರಗೆ ಓಡಿ ಬಂದಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದರು. ಸತತ ಪ್ರಯತ್ನ ಬಳಿಕ ಮಣ್ಣು ತೆರವು ಕಾರ್ಯ ನಡೆದ ಬಳಿಕ ಮಣ್ಣಿನಡಿ ಸಿಲುಕಿರುವ ಇಬ್ಬರು ಮಕ್ಕಳು ಮೃತಪಟ್ಟಿರುವುದು ಖಚಿತವಾಗಿದೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…