ಡ್ರೋನ್ ಮೂಲಕ ಭೂಮಾಪನ ಮತ್ತು ಇತರ ವಿನೂತನ ವಿಧಾನಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ ಹೇಳಿದರು. ಡ್ರೋನ್ ಮೂಲಕ ಜಾಗದ ಅಳತೆ ಮಾಡಿ, ಹಕ್ಕುಪತ್ರ ನೀಡುವ ಕ್ರಮ ಮೊದಲಾದ ಅನೇಕ ಹೊಸ ಪದ್ಧತಿಗಳು ಸದ್ಯದಲ್ಲೆ ಬಳಕೆಗೆ ಬರಲಿವೆ. ದೇಶದ ಭವ್ಯ ಇತಿಹಾಸ, ಪರಂಪರೆ, ಸಂಸ್ಕೃತಿ ಹಿನ್ನೆಲೆಯಲ್ಲಿ ವರ್ತಮಾನದ ಸ್ಥಿತಿಯನ್ನು ಗಮನಿಸಿ ರಾಷ್ಟ್ರದ ಉಜ್ವಲ ಭವಿಷ್ಯ ರೂಪಿಸಬೇಕಾಗಿದೆ ಎಂದರು.
ಪುಸ್ತಕವು ಎಲ್ಲಾ ಚಟುವಟಿಕೆಗಳ ವಿವರವಾದ ಮಾಹಿತಿಯನ್ನು ಹೊಂದಿದೆ. ಮುಂಬರುವ ದಿನಗಳಲ್ಲಿ ನೂತನ ಸಂಸತ್ ಭವನದಲ್ಲಿ ನಡೆಯುವ ಕಲಾಪದಲ್ಲಿ ಸಕ್ರಿಯವಾಗಿ ಭಾಗವಹಿಸಿ ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತೇನೆ. ಧರ್ಮಾಧಿಕಾರಿಯಾಗಿ ಮಂಜುನಾಥನ ಸೇವೆಯ ಜೊತೆಗೆ ರಾಷ್ಟ್ರ ಸೇವೆ ಮಾಡುವ ಸೌಭಾಗ್ಯ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ಸಂಸದರಾಗಿ ಸೇವೆ ಸಲ್ಲಿಸುವ ಅವಕಾಶವನ್ನು ನೀಡಿದ್ದಾರೆ. ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ಸಕ್ರಿಯವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಹೇಮಾವತಿ ವೀ. ಹೆಗ್ಗಡೆ ಉಪಸ್ಥಿತರಿದ್ದರು. ರಾಜ್ಯಸಭೆ ಸದಸ್ಯರ ಆಪ್ತ ಕಾರ್ಯದರ್ಶಿ ಕೆ.ಎನ್. ಜನಾರ್ದನ್ ಸ್ವಾಗತಿಸಿದರು. ರುಡ್ಸೆಟ್ನ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಿರಿ ಗ್ರಾಮೋದ್ಯೋಗ ಸಂಸ್ಥೆ, ಮಂಜುಶ್ರೀ ಪ್ರಿಂಟರ್ಸ್ ಹಾಗೂ ನಾನಾ ಶಾಲಾ-ಕಾಲೇಜುಗಳ ಮುಖ್ಯಸ್ಥರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…