ಮುಂದುವರಿದ ಮಳೆಯ ಅಬ್ಬರ | ಗುಂಡ್ಯದ ಅಡ್ಡಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲೂ ಎಚ್ಚರಿಕೆ |

July 18, 2024
3:15 PM
ಶಿರಾಡಿ ಘಾಟಿ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಗುಡ್ಡ ಕುಸಿತದ ಭೀತಿ ಎದುರಾಗಿದೆ. ಈಗಾಗಲೇ ಕೆಲವು ಕಡೆ ರಸ್ತೆಗೆ ಮಣ್ಣುಕುಸಿತವಾಗಿದೆ. ವಾಹನ ಓಡಾಟಕ್ಕೆ ನಿಧಾನವಾಗಿ ನಡೆಯುತ್ತಿದೆ.

ಮಂಗಳೂರು ಬೆಂಗಳೂರು ಹೆದ್ದಾರಿಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ದೊಡ್ಡ ತಪ್ಪಲು ರೈಲ್ವೆ ಟ್ರ್ಯಾಕ್ ಸಮೀಪ ಗುಡ್ಡ ಜರಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಮಣ್ಣುಗಳ ರಾಶಿ ಹೆದ್ದಾರಿ ರಸ್ತೆಗೆ ಬೀಳುತ್ತಿದ್ದು ವಾಹನ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ.………ಮುಂದೆ ಓದಿ……..

ಶಿರಾಡಿಯಲ್ಲಿ ಘನ ವಾಹನಗಳ ಸಾಲು

ಈ ಭಾಗದಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ರಸ್ತೆ ವಿಸ್ತರಣೆಗೆ ಈ ಹಿಂದೆ ಗುಡ್ಡವನ್ನು ಅಗೆಯಲಾಗಿತ್ತು. ಮಾರನಹಳ್ಳಿ ರೈಲ್ವೆ ಟ್ರ್ಯಾಕ್ ನಿಂದ ಸುಮಾರು 50 ಅಡಿ ಮೇಲ್ಭಾಗದಿಂದ ಮಣ್ಣು ಜರಿಯುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಏಕಕಾಲದಲ್ಲಿ ಒಂದು ಬದಿಯ ವಾಹನಕಷ್ಟೇ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ನಿಧಾನ ಗತಿಯಲ್ಲಿ ಎರಡು ಬದಿಯ ವಾಹನಕ್ಕೂ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಮಳೆ ನಿರಂತರ ಸುರಿಯಲಾರಂಭಿಸಿದರೆ ರೈಲು ಸಂಚಾರದಲ್ಲಿಯು ವ್ಯತ್ಯಾಸವಾಗಬಹುದು ಎಂದು ಹೇಳಲಾಗುತ್ತಿದೆ. ಇಂತಹದೇ ಪರಿಸ್ಥಿತಿ ಗುಂಡ್ಯದ ಅಡ್ಡ ಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲಿಯೂ ಕಾಣಲಾರಂಬಿಸಿದೆ. ನಿರಂತರ ಮಳೆ ಸುರಿದರೆ ಈ ಪ್ರದೇಶದಲ್ಲೂ ಗುಡ್ಡ ಕುಸಿಯಬಹುದೆಂದು ಹೇಳಲಾಗುತ್ತಿದೆ.………ಮುಂದೆ ಓದಿ……..

 

ಗುಡ್ಡ ಕುಸಿತದ ಪ್ರದೇಶದಲ್ಲಿ ವಾಹನ ಸಂಚಾರ
ಕುಸಿತದ ಭೀತಿಯಲ್ಲಿರುವ ಗುಡ್ಡ

ದೊಡ್ಡ ತಪ್ಪಲು ಸಮೀಪ ಗುಡ್ಡ ಜರಿಯುತ್ತಿರುವ ಕಾರಣ ಬೆಳಗ್ಗೆ 9 ಗಂಟೆಯಿಂದ ನೆಲ್ಯಾಡಿ -ಶಿರಾಡಿ- ಗುಂಡ್ಯ ಭಾಗದಿಂದ ಸಂಚರಿಸುವ ಘನವಾಹನಗಳಾದ ಟ್ಯಾಂಕರ್, 16 ಚಕ್ರದ ಟ್ರಕ್, ಟ್ರೈಲರ್ ಗಳನ್ನು ನೆಲ್ಯಾಡಿ – ಗುಂಡ್ಯ ಭಾಗದಲ್ಲಿಯೇ ನಿಲ್ಲಿಸಲಾಗಿದೆ. ಮಾರನಹಳ್ಳಿ ಸಮೀಪ ಸಂಚಾರ ನಿರ್ಬಂಧಗೊಂಡರೆ ವಾಹನ ದಟ್ಟಣೆ ನಿಯಂತ್ರಿಸಲು ಕಷ್ಟವಾದಿತು ಎನ್ನುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇನ್ನುಳಿದಂತೆ ಲಘು ವಾಹನಗಳು ಸಂಚಾರಿಸುತ್ತಿದೆ.

A landslide near Maranahalli in Sakaleshpur taluk on the Mangalore-Bangalore highway is disrupting vehicular traffic. Mud is falling onto the highway, causing traffic to move slowly. There is also a risk of hill collapse in certain areas of Shiradi Ghati. Heavy rain is still ongoing.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror