Advertisement
ಸುದ್ದಿಗಳು

ಮುಂದುವರಿದ ಮಳೆಯ ಅಬ್ಬರ | ಗುಂಡ್ಯದ ಅಡ್ಡಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲೂ ಎಚ್ಚರಿಕೆ |

Share

ಮಂಗಳೂರು ಬೆಂಗಳೂರು ಹೆದ್ದಾರಿಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ದೊಡ್ಡ ತಪ್ಪಲು ರೈಲ್ವೆ ಟ್ರ್ಯಾಕ್ ಸಮೀಪ ಗುಡ್ಡ ಜರಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಮಣ್ಣುಗಳ ರಾಶಿ ಹೆದ್ದಾರಿ ರಸ್ತೆಗೆ ಬೀಳುತ್ತಿದ್ದು ವಾಹನ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ.………ಮುಂದೆ ಓದಿ……..

Advertisement
Advertisement
ಶಿರಾಡಿಯಲ್ಲಿ ಘನ ವಾಹನಗಳ ಸಾಲು

ಈ ಭಾಗದಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ರಸ್ತೆ ವಿಸ್ತರಣೆಗೆ ಈ ಹಿಂದೆ ಗುಡ್ಡವನ್ನು ಅಗೆಯಲಾಗಿತ್ತು. ಮಾರನಹಳ್ಳಿ ರೈಲ್ವೆ ಟ್ರ್ಯಾಕ್ ನಿಂದ ಸುಮಾರು 50 ಅಡಿ ಮೇಲ್ಭಾಗದಿಂದ ಮಣ್ಣು ಜರಿಯುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಏಕಕಾಲದಲ್ಲಿ ಒಂದು ಬದಿಯ ವಾಹನಕಷ್ಟೇ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ನಿಧಾನ ಗತಿಯಲ್ಲಿ ಎರಡು ಬದಿಯ ವಾಹನಕ್ಕೂ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಮಳೆ ನಿರಂತರ ಸುರಿಯಲಾರಂಭಿಸಿದರೆ ರೈಲು ಸಂಚಾರದಲ್ಲಿಯು ವ್ಯತ್ಯಾಸವಾಗಬಹುದು ಎಂದು ಹೇಳಲಾಗುತ್ತಿದೆ. ಇಂತಹದೇ ಪರಿಸ್ಥಿತಿ ಗುಂಡ್ಯದ ಅಡ್ಡ ಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲಿಯೂ ಕಾಣಲಾರಂಬಿಸಿದೆ. ನಿರಂತರ ಮಳೆ ಸುರಿದರೆ ಈ ಪ್ರದೇಶದಲ್ಲೂ ಗುಡ್ಡ ಕುಸಿಯಬಹುದೆಂದು ಹೇಳಲಾಗುತ್ತಿದೆ.………ಮುಂದೆ ಓದಿ……..

 

ಗುಡ್ಡ ಕುಸಿತದ ಪ್ರದೇಶದಲ್ಲಿ ವಾಹನ ಸಂಚಾರ
ಕುಸಿತದ ಭೀತಿಯಲ್ಲಿರುವ ಗುಡ್ಡ

ದೊಡ್ಡ ತಪ್ಪಲು ಸಮೀಪ ಗುಡ್ಡ ಜರಿಯುತ್ತಿರುವ ಕಾರಣ ಬೆಳಗ್ಗೆ 9 ಗಂಟೆಯಿಂದ ನೆಲ್ಯಾಡಿ -ಶಿರಾಡಿ- ಗುಂಡ್ಯ ಭಾಗದಿಂದ ಸಂಚರಿಸುವ ಘನವಾಹನಗಳಾದ ಟ್ಯಾಂಕರ್, 16 ಚಕ್ರದ ಟ್ರಕ್, ಟ್ರೈಲರ್ ಗಳನ್ನು ನೆಲ್ಯಾಡಿ – ಗುಂಡ್ಯ ಭಾಗದಲ್ಲಿಯೇ ನಿಲ್ಲಿಸಲಾಗಿದೆ. ಮಾರನಹಳ್ಳಿ ಸಮೀಪ ಸಂಚಾರ ನಿರ್ಬಂಧಗೊಂಡರೆ ವಾಹನ ದಟ್ಟಣೆ ನಿಯಂತ್ರಿಸಲು ಕಷ್ಟವಾದಿತು ಎನ್ನುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇನ್ನುಳಿದಂತೆ ಲಘು ವಾಹನಗಳು ಸಂಚಾರಿಸುತ್ತಿದೆ.

A landslide near Maranahalli in Sakaleshpur taluk on the Mangalore-Bangalore highway is disrupting vehicular traffic. Mud is falling onto the highway, causing traffic to move slowly. There is also a risk of hill collapse in certain areas of Shiradi Ghati. Heavy rain is still ongoing.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

9 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

16 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

23 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

23 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

24 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

24 hours ago