ಸುದ್ದಿಗಳು

ಮುಂದುವರಿದ ಮಳೆಯ ಅಬ್ಬರ | ಗುಂಡ್ಯದ ಅಡ್ಡಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲೂ ಎಚ್ಚರಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು ಬೆಂಗಳೂರು ಹೆದ್ದಾರಿಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ದೊಡ್ಡ ತಪ್ಪಲು ರೈಲ್ವೆ ಟ್ರ್ಯಾಕ್ ಸಮೀಪ ಗುಡ್ಡ ಜರಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಮಣ್ಣುಗಳ ರಾಶಿ ಹೆದ್ದಾರಿ ರಸ್ತೆಗೆ ಬೀಳುತ್ತಿದ್ದು ವಾಹನ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ.………ಮುಂದೆ ಓದಿ……..

Advertisement
Advertisement
ಶಿರಾಡಿಯಲ್ಲಿ ಘನ ವಾಹನಗಳ ಸಾಲು

ಈ ಭಾಗದಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ರಸ್ತೆ ವಿಸ್ತರಣೆಗೆ ಈ ಹಿಂದೆ ಗುಡ್ಡವನ್ನು ಅಗೆಯಲಾಗಿತ್ತು. ಮಾರನಹಳ್ಳಿ ರೈಲ್ವೆ ಟ್ರ್ಯಾಕ್ ನಿಂದ ಸುಮಾರು 50 ಅಡಿ ಮೇಲ್ಭಾಗದಿಂದ ಮಣ್ಣು ಜರಿಯುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಏಕಕಾಲದಲ್ಲಿ ಒಂದು ಬದಿಯ ವಾಹನಕಷ್ಟೇ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ನಿಧಾನ ಗತಿಯಲ್ಲಿ ಎರಡು ಬದಿಯ ವಾಹನಕ್ಕೂ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಮಳೆ ನಿರಂತರ ಸುರಿಯಲಾರಂಭಿಸಿದರೆ ರೈಲು ಸಂಚಾರದಲ್ಲಿಯು ವ್ಯತ್ಯಾಸವಾಗಬಹುದು ಎಂದು ಹೇಳಲಾಗುತ್ತಿದೆ. ಇಂತಹದೇ ಪರಿಸ್ಥಿತಿ ಗುಂಡ್ಯದ ಅಡ್ಡ ಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲಿಯೂ ಕಾಣಲಾರಂಬಿಸಿದೆ. ನಿರಂತರ ಮಳೆ ಸುರಿದರೆ ಈ ಪ್ರದೇಶದಲ್ಲೂ ಗುಡ್ಡ ಕುಸಿಯಬಹುದೆಂದು ಹೇಳಲಾಗುತ್ತಿದೆ.………ಮುಂದೆ ಓದಿ……..

 

ಗುಡ್ಡ ಕುಸಿತದ ಪ್ರದೇಶದಲ್ಲಿ ವಾಹನ ಸಂಚಾರ
ಕುಸಿತದ ಭೀತಿಯಲ್ಲಿರುವ ಗುಡ್ಡ

ದೊಡ್ಡ ತಪ್ಪಲು ಸಮೀಪ ಗುಡ್ಡ ಜರಿಯುತ್ತಿರುವ ಕಾರಣ ಬೆಳಗ್ಗೆ 9 ಗಂಟೆಯಿಂದ ನೆಲ್ಯಾಡಿ -ಶಿರಾಡಿ- ಗುಂಡ್ಯ ಭಾಗದಿಂದ ಸಂಚರಿಸುವ ಘನವಾಹನಗಳಾದ ಟ್ಯಾಂಕರ್, 16 ಚಕ್ರದ ಟ್ರಕ್, ಟ್ರೈಲರ್ ಗಳನ್ನು ನೆಲ್ಯಾಡಿ – ಗುಂಡ್ಯ ಭಾಗದಲ್ಲಿಯೇ ನಿಲ್ಲಿಸಲಾಗಿದೆ. ಮಾರನಹಳ್ಳಿ ಸಮೀಪ ಸಂಚಾರ ನಿರ್ಬಂಧಗೊಂಡರೆ ವಾಹನ ದಟ್ಟಣೆ ನಿಯಂತ್ರಿಸಲು ಕಷ್ಟವಾದಿತು ಎನ್ನುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇನ್ನುಳಿದಂತೆ ಲಘು ವಾಹನಗಳು ಸಂಚಾರಿಸುತ್ತಿದೆ.

Advertisement

A landslide near Maranahalli in Sakaleshpur taluk on the Mangalore-Bangalore highway is disrupting vehicular traffic. Mud is falling onto the highway, causing traffic to move slowly. There is also a risk of hill collapse in certain areas of Shiradi Ghati. Heavy rain is still ongoing.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆರ್ದ್ರಾ ನಕ್ಷತ್ರಕ್ಕೆ ಗುರು | ಈ 7 ರಾಶಿಗೆ ಗುರು ಬಲ, ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 hours ago

ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ | ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ |

ಮುಂದಿನ ಐದು ದಿನಗಳಲ್ಲಿ ಕೇರಳದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ…

2 hours ago

1954 ರಿಂದ 2025 | ಅಡಿಕೆ ಮೇಲೆ ಆಪಾದನೆಗಳು ಬಂದ ದಾರಿ ಯಾವುದೆಲ್ಲಾ…?

1985 ರಲ್ಲಿ ಅಡಿಕೆ ಮಾರುಕಟ್ಟೆಗೆ ಕೊಠಾರಿ ಸಮೂಹ ಪ್ರವೇಶ ಮಾಡಿತು. ಅಲ್ಲಿಂದ ಅಡಿಕೆ…

2 hours ago

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500…

13 hours ago

ಅತೀ ಹೆಚ್ಚು ಪ್ರಮಾಣದ ತೊಗರಿ ಖರೀದಿಸಿದ ವಿಜಯಪುರ ಜಿಲ್ಲೆ

ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ನೊಂದಾಯಿಸಿಕೊಂಡ 45,843…

13 hours ago

ಮಳೆಗೆ ರಾಜಧಾನಿ ಬೆಂಗಳೂರು ಅಸ್ತವ್ಯಸ್ತ | ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ | ಕೋಲಾರದಲ್ಲಿ ಬೆಳೆ ನಷ್ಟ | ಚಿಕ್ಕಮಗಳೂರಿನಲ್ಲಿ ನಿರಂತರ ಮಳೆ

ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ನಗರದ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.…

13 hours ago