Advertisement
ಸುದ್ದಿಗಳು

ಮುಂದುವರಿದ ಮಳೆಯ ಅಬ್ಬರ | ಗುಂಡ್ಯದ ಅಡ್ಡಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲೂ ಎಚ್ಚರಿಕೆ |

Share

ಮಂಗಳೂರು ಬೆಂಗಳೂರು ಹೆದ್ದಾರಿಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ದೊಡ್ಡ ತಪ್ಪಲು ರೈಲ್ವೆ ಟ್ರ್ಯಾಕ್ ಸಮೀಪ ಗುಡ್ಡ ಜರಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಮಣ್ಣುಗಳ ರಾಶಿ ಹೆದ್ದಾರಿ ರಸ್ತೆಗೆ ಬೀಳುತ್ತಿದ್ದು ವಾಹನ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ.………ಮುಂದೆ ಓದಿ……..

ಶಿರಾಡಿಯಲ್ಲಿ ಘನ ವಾಹನಗಳ ಸಾಲು

ಈ ಭಾಗದಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ರಸ್ತೆ ವಿಸ್ತರಣೆಗೆ ಈ ಹಿಂದೆ ಗುಡ್ಡವನ್ನು ಅಗೆಯಲಾಗಿತ್ತು. ಮಾರನಹಳ್ಳಿ ರೈಲ್ವೆ ಟ್ರ್ಯಾಕ್ ನಿಂದ ಸುಮಾರು 50 ಅಡಿ ಮೇಲ್ಭಾಗದಿಂದ ಮಣ್ಣು ಜರಿಯುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಏಕಕಾಲದಲ್ಲಿ ಒಂದು ಬದಿಯ ವಾಹನಕಷ್ಟೇ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ನಿಧಾನ ಗತಿಯಲ್ಲಿ ಎರಡು ಬದಿಯ ವಾಹನಕ್ಕೂ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಮಳೆ ನಿರಂತರ ಸುರಿಯಲಾರಂಭಿಸಿದರೆ ರೈಲು ಸಂಚಾರದಲ್ಲಿಯು ವ್ಯತ್ಯಾಸವಾಗಬಹುದು ಎಂದು ಹೇಳಲಾಗುತ್ತಿದೆ. ಇಂತಹದೇ ಪರಿಸ್ಥಿತಿ ಗುಂಡ್ಯದ ಅಡ್ಡ ಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲಿಯೂ ಕಾಣಲಾರಂಬಿಸಿದೆ. ನಿರಂತರ ಮಳೆ ಸುರಿದರೆ ಈ ಪ್ರದೇಶದಲ್ಲೂ ಗುಡ್ಡ ಕುಸಿಯಬಹುದೆಂದು ಹೇಳಲಾಗುತ್ತಿದೆ.………ಮುಂದೆ ಓದಿ……..

 

ಗುಡ್ಡ ಕುಸಿತದ ಪ್ರದೇಶದಲ್ಲಿ ವಾಹನ ಸಂಚಾರ
ಕುಸಿತದ ಭೀತಿಯಲ್ಲಿರುವ ಗುಡ್ಡ

ದೊಡ್ಡ ತಪ್ಪಲು ಸಮೀಪ ಗುಡ್ಡ ಜರಿಯುತ್ತಿರುವ ಕಾರಣ ಬೆಳಗ್ಗೆ 9 ಗಂಟೆಯಿಂದ ನೆಲ್ಯಾಡಿ -ಶಿರಾಡಿ- ಗುಂಡ್ಯ ಭಾಗದಿಂದ ಸಂಚರಿಸುವ ಘನವಾಹನಗಳಾದ ಟ್ಯಾಂಕರ್, 16 ಚಕ್ರದ ಟ್ರಕ್, ಟ್ರೈಲರ್ ಗಳನ್ನು ನೆಲ್ಯಾಡಿ – ಗುಂಡ್ಯ ಭಾಗದಲ್ಲಿಯೇ ನಿಲ್ಲಿಸಲಾಗಿದೆ. ಮಾರನಹಳ್ಳಿ ಸಮೀಪ ಸಂಚಾರ ನಿರ್ಬಂಧಗೊಂಡರೆ ವಾಹನ ದಟ್ಟಣೆ ನಿಯಂತ್ರಿಸಲು ಕಷ್ಟವಾದಿತು ಎನ್ನುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇನ್ನುಳಿದಂತೆ ಲಘು ವಾಹನಗಳು ಸಂಚಾರಿಸುತ್ತಿದೆ.

A landslide near Maranahalli in Sakaleshpur taluk on the Mangalore-Bangalore highway is disrupting vehicular traffic. Mud is falling onto the highway, causing traffic to move slowly. There is also a risk of hill collapse in certain areas of Shiradi Ghati. Heavy rain is still ongoing.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

3 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

5 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

6 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

8 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

19 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

22 hours ago