Advertisement
ಸುದ್ದಿಗಳು

ಮುಂದುವರಿದ ಮಳೆಯ ಅಬ್ಬರ | ಗುಂಡ್ಯದ ಅಡ್ಡಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲೂ ಎಚ್ಚರಿಕೆ |

Share

ಮಂಗಳೂರು ಬೆಂಗಳೂರು ಹೆದ್ದಾರಿಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ದೊಡ್ಡ ತಪ್ಪಲು ರೈಲ್ವೆ ಟ್ರ್ಯಾಕ್ ಸಮೀಪ ಗುಡ್ಡ ಜರಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಮಣ್ಣುಗಳ ರಾಶಿ ಹೆದ್ದಾರಿ ರಸ್ತೆಗೆ ಬೀಳುತ್ತಿದ್ದು ವಾಹನ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ.………ಮುಂದೆ ಓದಿ……..

ಶಿರಾಡಿಯಲ್ಲಿ ಘನ ವಾಹನಗಳ ಸಾಲು

ಈ ಭಾಗದಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ರಸ್ತೆ ವಿಸ್ತರಣೆಗೆ ಈ ಹಿಂದೆ ಗುಡ್ಡವನ್ನು ಅಗೆಯಲಾಗಿತ್ತು. ಮಾರನಹಳ್ಳಿ ರೈಲ್ವೆ ಟ್ರ್ಯಾಕ್ ನಿಂದ ಸುಮಾರು 50 ಅಡಿ ಮೇಲ್ಭಾಗದಿಂದ ಮಣ್ಣು ಜರಿಯುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಏಕಕಾಲದಲ್ಲಿ ಒಂದು ಬದಿಯ ವಾಹನಕಷ್ಟೇ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ನಿಧಾನ ಗತಿಯಲ್ಲಿ ಎರಡು ಬದಿಯ ವಾಹನಕ್ಕೂ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಮಳೆ ನಿರಂತರ ಸುರಿಯಲಾರಂಭಿಸಿದರೆ ರೈಲು ಸಂಚಾರದಲ್ಲಿಯು ವ್ಯತ್ಯಾಸವಾಗಬಹುದು ಎಂದು ಹೇಳಲಾಗುತ್ತಿದೆ. ಇಂತಹದೇ ಪರಿಸ್ಥಿತಿ ಗುಂಡ್ಯದ ಅಡ್ಡ ಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲಿಯೂ ಕಾಣಲಾರಂಬಿಸಿದೆ. ನಿರಂತರ ಮಳೆ ಸುರಿದರೆ ಈ ಪ್ರದೇಶದಲ್ಲೂ ಗುಡ್ಡ ಕುಸಿಯಬಹುದೆಂದು ಹೇಳಲಾಗುತ್ತಿದೆ.………ಮುಂದೆ ಓದಿ……..

 

ಗುಡ್ಡ ಕುಸಿತದ ಪ್ರದೇಶದಲ್ಲಿ ವಾಹನ ಸಂಚಾರ
ಕುಸಿತದ ಭೀತಿಯಲ್ಲಿರುವ ಗುಡ್ಡ

ದೊಡ್ಡ ತಪ್ಪಲು ಸಮೀಪ ಗುಡ್ಡ ಜರಿಯುತ್ತಿರುವ ಕಾರಣ ಬೆಳಗ್ಗೆ 9 ಗಂಟೆಯಿಂದ ನೆಲ್ಯಾಡಿ -ಶಿರಾಡಿ- ಗುಂಡ್ಯ ಭಾಗದಿಂದ ಸಂಚರಿಸುವ ಘನವಾಹನಗಳಾದ ಟ್ಯಾಂಕರ್, 16 ಚಕ್ರದ ಟ್ರಕ್, ಟ್ರೈಲರ್ ಗಳನ್ನು ನೆಲ್ಯಾಡಿ – ಗುಂಡ್ಯ ಭಾಗದಲ್ಲಿಯೇ ನಿಲ್ಲಿಸಲಾಗಿದೆ. ಮಾರನಹಳ್ಳಿ ಸಮೀಪ ಸಂಚಾರ ನಿರ್ಬಂಧಗೊಂಡರೆ ವಾಹನ ದಟ್ಟಣೆ ನಿಯಂತ್ರಿಸಲು ಕಷ್ಟವಾದಿತು ಎನ್ನುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇನ್ನುಳಿದಂತೆ ಲಘು ವಾಹನಗಳು ಸಂಚಾರಿಸುತ್ತಿದೆ.

A landslide near Maranahalli in Sakaleshpur taluk on the Mangalore-Bangalore highway is disrupting vehicular traffic. Mud is falling onto the highway, causing traffic to move slowly. There is also a risk of hill collapse in certain areas of Shiradi Ghati. Heavy rain is still ongoing.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

7 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

14 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago