Advertisement
ಸುದ್ದಿಗಳು

ಮುಂದುವರಿದ ಮಳೆಯ ಅಬ್ಬರ | ಗುಂಡ್ಯದ ಅಡ್ಡಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲೂ ಎಚ್ಚರಿಕೆ |

Share

ಮಂಗಳೂರು ಬೆಂಗಳೂರು ಹೆದ್ದಾರಿಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ದೊಡ್ಡ ತಪ್ಪಲು ರೈಲ್ವೆ ಟ್ರ್ಯಾಕ್ ಸಮೀಪ ಗುಡ್ಡ ಜರಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಮಣ್ಣುಗಳ ರಾಶಿ ಹೆದ್ದಾರಿ ರಸ್ತೆಗೆ ಬೀಳುತ್ತಿದ್ದು ವಾಹನ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ.………ಮುಂದೆ ಓದಿ……..

ಶಿರಾಡಿಯಲ್ಲಿ ಘನ ವಾಹನಗಳ ಸಾಲು

ಈ ಭಾಗದಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ರಸ್ತೆ ವಿಸ್ತರಣೆಗೆ ಈ ಹಿಂದೆ ಗುಡ್ಡವನ್ನು ಅಗೆಯಲಾಗಿತ್ತು. ಮಾರನಹಳ್ಳಿ ರೈಲ್ವೆ ಟ್ರ್ಯಾಕ್ ನಿಂದ ಸುಮಾರು 50 ಅಡಿ ಮೇಲ್ಭಾಗದಿಂದ ಮಣ್ಣು ಜರಿಯುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಏಕಕಾಲದಲ್ಲಿ ಒಂದು ಬದಿಯ ವಾಹನಕಷ್ಟೇ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ನಿಧಾನ ಗತಿಯಲ್ಲಿ ಎರಡು ಬದಿಯ ವಾಹನಕ್ಕೂ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಮಳೆ ನಿರಂತರ ಸುರಿಯಲಾರಂಭಿಸಿದರೆ ರೈಲು ಸಂಚಾರದಲ್ಲಿಯು ವ್ಯತ್ಯಾಸವಾಗಬಹುದು ಎಂದು ಹೇಳಲಾಗುತ್ತಿದೆ. ಇಂತಹದೇ ಪರಿಸ್ಥಿತಿ ಗುಂಡ್ಯದ ಅಡ್ಡ ಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲಿಯೂ ಕಾಣಲಾರಂಬಿಸಿದೆ. ನಿರಂತರ ಮಳೆ ಸುರಿದರೆ ಈ ಪ್ರದೇಶದಲ್ಲೂ ಗುಡ್ಡ ಕುಸಿಯಬಹುದೆಂದು ಹೇಳಲಾಗುತ್ತಿದೆ.………ಮುಂದೆ ಓದಿ……..

 

ಗುಡ್ಡ ಕುಸಿತದ ಪ್ರದೇಶದಲ್ಲಿ ವಾಹನ ಸಂಚಾರ
ಕುಸಿತದ ಭೀತಿಯಲ್ಲಿರುವ ಗುಡ್ಡ

ದೊಡ್ಡ ತಪ್ಪಲು ಸಮೀಪ ಗುಡ್ಡ ಜರಿಯುತ್ತಿರುವ ಕಾರಣ ಬೆಳಗ್ಗೆ 9 ಗಂಟೆಯಿಂದ ನೆಲ್ಯಾಡಿ -ಶಿರಾಡಿ- ಗುಂಡ್ಯ ಭಾಗದಿಂದ ಸಂಚರಿಸುವ ಘನವಾಹನಗಳಾದ ಟ್ಯಾಂಕರ್, 16 ಚಕ್ರದ ಟ್ರಕ್, ಟ್ರೈಲರ್ ಗಳನ್ನು ನೆಲ್ಯಾಡಿ – ಗುಂಡ್ಯ ಭಾಗದಲ್ಲಿಯೇ ನಿಲ್ಲಿಸಲಾಗಿದೆ. ಮಾರನಹಳ್ಳಿ ಸಮೀಪ ಸಂಚಾರ ನಿರ್ಬಂಧಗೊಂಡರೆ ವಾಹನ ದಟ್ಟಣೆ ನಿಯಂತ್ರಿಸಲು ಕಷ್ಟವಾದಿತು ಎನ್ನುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇನ್ನುಳಿದಂತೆ ಲಘು ವಾಹನಗಳು ಸಂಚಾರಿಸುತ್ತಿದೆ.

A landslide near Maranahalli in Sakaleshpur taluk on the Mangalore-Bangalore highway is disrupting vehicular traffic. Mud is falling onto the highway, causing traffic to move slowly. There is also a risk of hill collapse in certain areas of Shiradi Ghati. Heavy rain is still ongoing.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

7 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

11 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

22 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

23 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

24 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

1 day ago