Advertisement
ಸುದ್ದಿಗಳು

ಮುಂದುವರಿದ ಮಳೆಯ ಅಬ್ಬರ | ಗುಂಡ್ಯದ ಅಡ್ಡಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲೂ ಎಚ್ಚರಿಕೆ |

Share

ಮಂಗಳೂರು ಬೆಂಗಳೂರು ಹೆದ್ದಾರಿಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ದೊಡ್ಡ ತಪ್ಪಲು ರೈಲ್ವೆ ಟ್ರ್ಯಾಕ್ ಸಮೀಪ ಗುಡ್ಡ ಜರಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಮಣ್ಣುಗಳ ರಾಶಿ ಹೆದ್ದಾರಿ ರಸ್ತೆಗೆ ಬೀಳುತ್ತಿದ್ದು ವಾಹನ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ.………ಮುಂದೆ ಓದಿ……..

ಶಿರಾಡಿಯಲ್ಲಿ ಘನ ವಾಹನಗಳ ಸಾಲು

ಈ ಭಾಗದಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ರಸ್ತೆ ವಿಸ್ತರಣೆಗೆ ಈ ಹಿಂದೆ ಗುಡ್ಡವನ್ನು ಅಗೆಯಲಾಗಿತ್ತು. ಮಾರನಹಳ್ಳಿ ರೈಲ್ವೆ ಟ್ರ್ಯಾಕ್ ನಿಂದ ಸುಮಾರು 50 ಅಡಿ ಮೇಲ್ಭಾಗದಿಂದ ಮಣ್ಣು ಜರಿಯುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಏಕಕಾಲದಲ್ಲಿ ಒಂದು ಬದಿಯ ವಾಹನಕಷ್ಟೇ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ನಿಧಾನ ಗತಿಯಲ್ಲಿ ಎರಡು ಬದಿಯ ವಾಹನಕ್ಕೂ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಮಳೆ ನಿರಂತರ ಸುರಿಯಲಾರಂಭಿಸಿದರೆ ರೈಲು ಸಂಚಾರದಲ್ಲಿಯು ವ್ಯತ್ಯಾಸವಾಗಬಹುದು ಎಂದು ಹೇಳಲಾಗುತ್ತಿದೆ. ಇಂತಹದೇ ಪರಿಸ್ಥಿತಿ ಗುಂಡ್ಯದ ಅಡ್ಡ ಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲಿಯೂ ಕಾಣಲಾರಂಬಿಸಿದೆ. ನಿರಂತರ ಮಳೆ ಸುರಿದರೆ ಈ ಪ್ರದೇಶದಲ್ಲೂ ಗುಡ್ಡ ಕುಸಿಯಬಹುದೆಂದು ಹೇಳಲಾಗುತ್ತಿದೆ.………ಮುಂದೆ ಓದಿ……..

 

ಗುಡ್ಡ ಕುಸಿತದ ಪ್ರದೇಶದಲ್ಲಿ ವಾಹನ ಸಂಚಾರ
ಕುಸಿತದ ಭೀತಿಯಲ್ಲಿರುವ ಗುಡ್ಡ

ದೊಡ್ಡ ತಪ್ಪಲು ಸಮೀಪ ಗುಡ್ಡ ಜರಿಯುತ್ತಿರುವ ಕಾರಣ ಬೆಳಗ್ಗೆ 9 ಗಂಟೆಯಿಂದ ನೆಲ್ಯಾಡಿ -ಶಿರಾಡಿ- ಗುಂಡ್ಯ ಭಾಗದಿಂದ ಸಂಚರಿಸುವ ಘನವಾಹನಗಳಾದ ಟ್ಯಾಂಕರ್, 16 ಚಕ್ರದ ಟ್ರಕ್, ಟ್ರೈಲರ್ ಗಳನ್ನು ನೆಲ್ಯಾಡಿ – ಗುಂಡ್ಯ ಭಾಗದಲ್ಲಿಯೇ ನಿಲ್ಲಿಸಲಾಗಿದೆ. ಮಾರನಹಳ್ಳಿ ಸಮೀಪ ಸಂಚಾರ ನಿರ್ಬಂಧಗೊಂಡರೆ ವಾಹನ ದಟ್ಟಣೆ ನಿಯಂತ್ರಿಸಲು ಕಷ್ಟವಾದಿತು ಎನ್ನುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇನ್ನುಳಿದಂತೆ ಲಘು ವಾಹನಗಳು ಸಂಚಾರಿಸುತ್ತಿದೆ.

A landslide near Maranahalli in Sakaleshpur taluk on the Mangalore-Bangalore highway is disrupting vehicular traffic. Mud is falling onto the highway, causing traffic to move slowly. There is also a risk of hill collapse in certain areas of Shiradi Ghati. Heavy rain is still ongoing.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

7 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

24 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago