Advertisement
MIRROR FOCUS

ಮಲೆನಾಡಲ್ಲಿ ಅಬ್ಬರಿಸಿದ ವರುಣ | ಶಿರಾಡಿ ಘಾಟಿಯಲ್ಲಿ ಭೂಕುಸಿತ | ಚಾರ್ಮಾಡಿ ಘಾಟ್‌ನಲ್ಲಿ ಮರ ಬಿದ್ದು ರಸ್ತೆ ಬಂದ್ | ಉಪ್ಪಿನಂಗಡಿಯಲ್ಲಿ ನೇತ್ರಾವತಿ-ಕುಮಾರಧಾರಾ ಸಂಗಮಕ್ಕೆ ಹತ್ತಿರ | ಘಟಪ್ರಭಾ ನದಿಯ ಅಬ್ಬರಕ್ಕೆ ಊರಿಗೆ ಊರೇ ಮುಳುಗಡೆ..! |

Share

ರಾಜ್ಯದಾದ್ಯಂತ ವರುಣ ಮತ್ತೆ ಅಬ್ಬರಿಸಿದ್ದಾರೆ. ಅದರಲ್ಲೂ ಪಶ್ಚಿಮಘಟ್ಟದ ತಪ್ಪಲು ಹಾಗೂ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಜಲ ಪ್ರಳಯದ ಪರಿಸ್ಥಿತಿ ಉಂಟಾಗಿದೆ. ಜನ ಜೀವನ ಅಸ್ಥವ್ಯಸ್ಥಗೊಂಡಿದೆ. ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತಗೊಂಡಿದೆ. ಕೊಡಗಿನಲ್ಲೂ ಭಾರೀ ಮಳೆಯಾಗುತ್ತಿದೆ, ಸಂಪಾಜೆ ಘಾಟಿ ರಸ್ತೆಯೂ ಸಂಚಾರ ಸ್ಥಗಿತದ ಭೀತಿಯಲ್ಲಿದೆ. ಚಾರ್ಮಾಡಿಯಲ್ಲಿ ಮರ ಬಿದ್ದು ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ ಆಗಿದೆ. ಬೆಳಗಾವಿ ಜಿಲ್ಲೆಯ  ಘಟಪ್ರಭಾ ನದಿಯ ಅಬ್ಬರಕ್ಕೆ ಗೋಕಾಕ್ ತಾಲೂಕಿನ ಮೆಳವಂಕಿ ಗ್ರಾಮದಲ್ಲಿರುವ 500ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ.

ಭಾರೀ ಮಳೆಗೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯಲ್ಲಿ ಭಾರೀ ಅನಾಹುತ ಸಂಭವಿಸಿದೆ. ಶಿರಾಡಿ ಘಾಟ್‌ನ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ರಸ್ತೆ ಬದಿಯ ಭೂಕುಸಿತಕ್ಕೆ ಲಾರಿ ಉರುಳಿ ಬಿದ್ದಿದ್ದು ಲಾರಿಯ ಸಮೀಪ ಮಂಗಳೂರಿಗೆ ಹೋಗುತ್ತಿದ್ದ ಎರಡು ಕಾರುಗಳು ಮತ್ತು ಟ್ಯಾಂಕರ್ ಸಿಲುಕಿವೆ.ಆತಂಕದ ವಾತಾವರಣ ಸೃಷ್ಟಿಯಾಗಿದೆ. ಸಕಲೇಶಪುರ- ಸುಬ್ರಹ್ಮಣ್ಯ ರೈಲ್ವೇ ಹಳಿಗೆ ಗುಡ್ಡ ಕುಸಿದು ಮಂಗಳೂರು- ಬೆಂಗಳೂರು ರೈಲು ಸ್ಥಗಿತಗೊಂಡಿದೆ.  ಮಳೆಯಿಂದ ಚಾರ್ಮಾಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಬೃಹತ್ ಮರವೊಂದು ರಸ್ತೆಗುರುಳಿದೆ. ಇದರಿಂದಾಗಿ ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇತ್ರಾವತಿ ಹಾಗೂ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಉಪ್ಪಿನಂಗಡಿ ಬಳಿ ಎರಡೂ ನದಿಗಳು ಸಂಗಮವಾಗುವ ಸ್ಥಳದಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಸಂಗಮ ಕ್ಷೇತ್ರದಲ್ಲಿ ಎರಡೂ ನದಿ ಸಂಗಮವಾಗುವ ಲಕ್ಷಣ ಇದೆ.

ಮಳೆಯ ಅಬ್ಬರದಿಂದ ಎನ್‌ಆರ್‌ಪುರ ತಾಲೂಕಿನ ಮಹಲ್ಗೋಡು ಸೇತುವೆ ಸಹ ಮುಳುಗಡೆಯಾಗಿದೆ. ಪರಿಣಾಮ ಬಾಳೆಹೊನ್ನೂರು-ಕಳಸ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಸೇತುವೆ ಜಾಲಾವೃತವಾಗಿದ್ದು ಜನ ಪರದಾಡುವಂತಾಗಿದೆ. ಶೃಂಗೇರಿ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಬಂದ್ ಇನ್ನೂ ಶೃಂಗೇರಿಯ  ನೆಮ್ಮಾರು ಬಳಿ ಹೆದ್ದಾರಿ 169ರಲ್ಲಿ ತುಂಗಾ ನದಿ ಸೇತುವೆ ಮೇಲೆ ಹರಿಯುತ್ತಿದ್ದು, ಶೃಂಗೇರಿ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ಇನ್ನೂ ನದಿಯ ಆರ್ಭಟ ಕಂಡು ವಾಹನ ಚಾಲಕರು ಭಯಗೊಂಡು ವಾಪಸ್ಸಾಗಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಸೋಮವಾರ ಸಂಜೆ ಸುರಿದ ಭಾರೀ ಮಳೆಗೆ ತ್ರಿವೇಣಿ ಸಂಗಮ ಮುಳುಗಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ನಿನ್ನೆಯಿಂದ ಸುರಿದ ಭಾರಿ ಮಳೆಗೆ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ಭಾಗಮಂಡಲದ ಭಗಂಡೇಶ್ವರನ ಸನ್ನಿಧಿಯ  ಮುಂಭಾಗದ ಮೆಟ್ಟಿಲುವರೆಗೆ ನೀರು ಆವರಿಸಿದೆ.ಭಾಗಮಂಡಲ  ಸಂಪೂರ್ಣವಾಗಿ ಜಲಾವೃತವಾಗಿದೆ. ಕೆಳಭಾಗದ ನಾಪೋಕ್ಲು ರಸ್ತೆ ಮತ್ತು ಮಡಿಕೇರಿ ರಸ್ತೆ ಮುಳುಗಡೆಯಾಗಿದೆ. ಮಳೆ, ಗಾಳಿಯ ಆರ್ಭಟಕ್ಕೆ ಈ ಭಾಗದ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಘಟಪ್ರಭಾ ನದಿಯ  ಅಬ್ಬರಕ್ಕೆ ಗೋಕಾಕ್ ತಾಲೂಕಿನ ಮೆಳವಂಕಿ ಗ್ರಾಮದಲ್ಲಿರುವ 500ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿ ಊರಿಗೆ ಊರೇ ಜಲ ಪ್ರಳಯದಲ್ಲಿ  ಮುಳುಗಿಹೊಗಿದೆ. 500 ಮನೆಗಳ ಇಡಿ ಗ್ರಾಮವನ್ನು ಸುತ್ತುವರೆದಿರುವ ನದಿ ಹೊಲ ಗದ್ದೆ, ದೇವಸ್ಥಾನ ಮನೆಗಳು ನೀರಿನಲ್ಲಿ ತೇಲಿ ಅವಾಂತರ ಸೃಷ್ಟಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

2 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

5 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

11 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

17 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

18 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago