Advertisement
MIRROR FOCUS

ಮಲೆನಾಡಲ್ಲಿ ಅಬ್ಬರಿಸಿದ ವರುಣ | ಶಿರಾಡಿ ಘಾಟಿಯಲ್ಲಿ ಭೂಕುಸಿತ | ಚಾರ್ಮಾಡಿ ಘಾಟ್‌ನಲ್ಲಿ ಮರ ಬಿದ್ದು ರಸ್ತೆ ಬಂದ್ | ಉಪ್ಪಿನಂಗಡಿಯಲ್ಲಿ ನೇತ್ರಾವತಿ-ಕುಮಾರಧಾರಾ ಸಂಗಮಕ್ಕೆ ಹತ್ತಿರ | ಘಟಪ್ರಭಾ ನದಿಯ ಅಬ್ಬರಕ್ಕೆ ಊರಿಗೆ ಊರೇ ಮುಳುಗಡೆ..! |

Share

ರಾಜ್ಯದಾದ್ಯಂತ ವರುಣ ಮತ್ತೆ ಅಬ್ಬರಿಸಿದ್ದಾರೆ. ಅದರಲ್ಲೂ ಪಶ್ಚಿಮಘಟ್ಟದ ತಪ್ಪಲು ಹಾಗೂ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಜಲ ಪ್ರಳಯದ ಪರಿಸ್ಥಿತಿ ಉಂಟಾಗಿದೆ. ಜನ ಜೀವನ ಅಸ್ಥವ್ಯಸ್ಥಗೊಂಡಿದೆ. ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತಗೊಂಡಿದೆ. ಕೊಡಗಿನಲ್ಲೂ ಭಾರೀ ಮಳೆಯಾಗುತ್ತಿದೆ, ಸಂಪಾಜೆ ಘಾಟಿ ರಸ್ತೆಯೂ ಸಂಚಾರ ಸ್ಥಗಿತದ ಭೀತಿಯಲ್ಲಿದೆ. ಚಾರ್ಮಾಡಿಯಲ್ಲಿ ಮರ ಬಿದ್ದು ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ ಆಗಿದೆ. ಬೆಳಗಾವಿ ಜಿಲ್ಲೆಯ  ಘಟಪ್ರಭಾ ನದಿಯ ಅಬ್ಬರಕ್ಕೆ ಗೋಕಾಕ್ ತಾಲೂಕಿನ ಮೆಳವಂಕಿ ಗ್ರಾಮದಲ್ಲಿರುವ 500ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ.

ಭಾರೀ ಮಳೆಗೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯಲ್ಲಿ ಭಾರೀ ಅನಾಹುತ ಸಂಭವಿಸಿದೆ. ಶಿರಾಡಿ ಘಾಟ್‌ನ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ರಸ್ತೆ ಬದಿಯ ಭೂಕುಸಿತಕ್ಕೆ ಲಾರಿ ಉರುಳಿ ಬಿದ್ದಿದ್ದು ಲಾರಿಯ ಸಮೀಪ ಮಂಗಳೂರಿಗೆ ಹೋಗುತ್ತಿದ್ದ ಎರಡು ಕಾರುಗಳು ಮತ್ತು ಟ್ಯಾಂಕರ್ ಸಿಲುಕಿವೆ.ಆತಂಕದ ವಾತಾವರಣ ಸೃಷ್ಟಿಯಾಗಿದೆ. ಸಕಲೇಶಪುರ- ಸುಬ್ರಹ್ಮಣ್ಯ ರೈಲ್ವೇ ಹಳಿಗೆ ಗುಡ್ಡ ಕುಸಿದು ಮಂಗಳೂರು- ಬೆಂಗಳೂರು ರೈಲು ಸ್ಥಗಿತಗೊಂಡಿದೆ.  ಮಳೆಯಿಂದ ಚಾರ್ಮಾಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಬೃಹತ್ ಮರವೊಂದು ರಸ್ತೆಗುರುಳಿದೆ. ಇದರಿಂದಾಗಿ ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇತ್ರಾವತಿ ಹಾಗೂ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಉಪ್ಪಿನಂಗಡಿ ಬಳಿ ಎರಡೂ ನದಿಗಳು ಸಂಗಮವಾಗುವ ಸ್ಥಳದಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಸಂಗಮ ಕ್ಷೇತ್ರದಲ್ಲಿ ಎರಡೂ ನದಿ ಸಂಗಮವಾಗುವ ಲಕ್ಷಣ ಇದೆ.

ಮಳೆಯ ಅಬ್ಬರದಿಂದ ಎನ್‌ಆರ್‌ಪುರ ತಾಲೂಕಿನ ಮಹಲ್ಗೋಡು ಸೇತುವೆ ಸಹ ಮುಳುಗಡೆಯಾಗಿದೆ. ಪರಿಣಾಮ ಬಾಳೆಹೊನ್ನೂರು-ಕಳಸ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಸೇತುವೆ ಜಾಲಾವೃತವಾಗಿದ್ದು ಜನ ಪರದಾಡುವಂತಾಗಿದೆ. ಶೃಂಗೇರಿ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಬಂದ್ ಇನ್ನೂ ಶೃಂಗೇರಿಯ  ನೆಮ್ಮಾರು ಬಳಿ ಹೆದ್ದಾರಿ 169ರಲ್ಲಿ ತುಂಗಾ ನದಿ ಸೇತುವೆ ಮೇಲೆ ಹರಿಯುತ್ತಿದ್ದು, ಶೃಂಗೇರಿ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ಇನ್ನೂ ನದಿಯ ಆರ್ಭಟ ಕಂಡು ವಾಹನ ಚಾಲಕರು ಭಯಗೊಂಡು ವಾಪಸ್ಸಾಗಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಸೋಮವಾರ ಸಂಜೆ ಸುರಿದ ಭಾರೀ ಮಳೆಗೆ ತ್ರಿವೇಣಿ ಸಂಗಮ ಮುಳುಗಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ನಿನ್ನೆಯಿಂದ ಸುರಿದ ಭಾರಿ ಮಳೆಗೆ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ಭಾಗಮಂಡಲದ ಭಗಂಡೇಶ್ವರನ ಸನ್ನಿಧಿಯ  ಮುಂಭಾಗದ ಮೆಟ್ಟಿಲುವರೆಗೆ ನೀರು ಆವರಿಸಿದೆ.ಭಾಗಮಂಡಲ  ಸಂಪೂರ್ಣವಾಗಿ ಜಲಾವೃತವಾಗಿದೆ. ಕೆಳಭಾಗದ ನಾಪೋಕ್ಲು ರಸ್ತೆ ಮತ್ತು ಮಡಿಕೇರಿ ರಸ್ತೆ ಮುಳುಗಡೆಯಾಗಿದೆ. ಮಳೆ, ಗಾಳಿಯ ಆರ್ಭಟಕ್ಕೆ ಈ ಭಾಗದ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಘಟಪ್ರಭಾ ನದಿಯ  ಅಬ್ಬರಕ್ಕೆ ಗೋಕಾಕ್ ತಾಲೂಕಿನ ಮೆಳವಂಕಿ ಗ್ರಾಮದಲ್ಲಿರುವ 500ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿ ಊರಿಗೆ ಊರೇ ಜಲ ಪ್ರಳಯದಲ್ಲಿ  ಮುಳುಗಿಹೊಗಿದೆ. 500 ಮನೆಗಳ ಇಡಿ ಗ್ರಾಮವನ್ನು ಸುತ್ತುವರೆದಿರುವ ನದಿ ಹೊಲ ಗದ್ದೆ, ದೇವಸ್ಥಾನ ಮನೆಗಳು ನೀರಿನಲ್ಲಿ ತೇಲಿ ಅವಾಂತರ ಸೃಷ್ಟಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

9 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

9 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago