Advertisement
MIRROR FOCUS

ಮಲೆನಾಡಲ್ಲಿ ಅಬ್ಬರಿಸಿದ ವರುಣ | ಶಿರಾಡಿ ಘಾಟಿಯಲ್ಲಿ ಭೂಕುಸಿತ | ಚಾರ್ಮಾಡಿ ಘಾಟ್‌ನಲ್ಲಿ ಮರ ಬಿದ್ದು ರಸ್ತೆ ಬಂದ್ | ಉಪ್ಪಿನಂಗಡಿಯಲ್ಲಿ ನೇತ್ರಾವತಿ-ಕುಮಾರಧಾರಾ ಸಂಗಮಕ್ಕೆ ಹತ್ತಿರ | ಘಟಪ್ರಭಾ ನದಿಯ ಅಬ್ಬರಕ್ಕೆ ಊರಿಗೆ ಊರೇ ಮುಳುಗಡೆ..! |

Share

ರಾಜ್ಯದಾದ್ಯಂತ ವರುಣ ಮತ್ತೆ ಅಬ್ಬರಿಸಿದ್ದಾರೆ. ಅದರಲ್ಲೂ ಪಶ್ಚಿಮಘಟ್ಟದ ತಪ್ಪಲು ಹಾಗೂ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಜಲ ಪ್ರಳಯದ ಪರಿಸ್ಥಿತಿ ಉಂಟಾಗಿದೆ. ಜನ ಜೀವನ ಅಸ್ಥವ್ಯಸ್ಥಗೊಂಡಿದೆ. ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತಗೊಂಡಿದೆ. ಕೊಡಗಿನಲ್ಲೂ ಭಾರೀ ಮಳೆಯಾಗುತ್ತಿದೆ, ಸಂಪಾಜೆ ಘಾಟಿ ರಸ್ತೆಯೂ ಸಂಚಾರ ಸ್ಥಗಿತದ ಭೀತಿಯಲ್ಲಿದೆ. ಚಾರ್ಮಾಡಿಯಲ್ಲಿ ಮರ ಬಿದ್ದು ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ ಆಗಿದೆ. ಬೆಳಗಾವಿ ಜಿಲ್ಲೆಯ  ಘಟಪ್ರಭಾ ನದಿಯ ಅಬ್ಬರಕ್ಕೆ ಗೋಕಾಕ್ ತಾಲೂಕಿನ ಮೆಳವಂಕಿ ಗ್ರಾಮದಲ್ಲಿರುವ 500ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ.

ಭಾರೀ ಮಳೆಗೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯಲ್ಲಿ ಭಾರೀ ಅನಾಹುತ ಸಂಭವಿಸಿದೆ. ಶಿರಾಡಿ ಘಾಟ್‌ನ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ರಸ್ತೆ ಬದಿಯ ಭೂಕುಸಿತಕ್ಕೆ ಲಾರಿ ಉರುಳಿ ಬಿದ್ದಿದ್ದು ಲಾರಿಯ ಸಮೀಪ ಮಂಗಳೂರಿಗೆ ಹೋಗುತ್ತಿದ್ದ ಎರಡು ಕಾರುಗಳು ಮತ್ತು ಟ್ಯಾಂಕರ್ ಸಿಲುಕಿವೆ.ಆತಂಕದ ವಾತಾವರಣ ಸೃಷ್ಟಿಯಾಗಿದೆ. ಸಕಲೇಶಪುರ- ಸುಬ್ರಹ್ಮಣ್ಯ ರೈಲ್ವೇ ಹಳಿಗೆ ಗುಡ್ಡ ಕುಸಿದು ಮಂಗಳೂರು- ಬೆಂಗಳೂರು ರೈಲು ಸ್ಥಗಿತಗೊಂಡಿದೆ.  ಮಳೆಯಿಂದ ಚಾರ್ಮಾಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಬೃಹತ್ ಮರವೊಂದು ರಸ್ತೆಗುರುಳಿದೆ. ಇದರಿಂದಾಗಿ ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇತ್ರಾವತಿ ಹಾಗೂ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಉಪ್ಪಿನಂಗಡಿ ಬಳಿ ಎರಡೂ ನದಿಗಳು ಸಂಗಮವಾಗುವ ಸ್ಥಳದಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಸಂಗಮ ಕ್ಷೇತ್ರದಲ್ಲಿ ಎರಡೂ ನದಿ ಸಂಗಮವಾಗುವ ಲಕ್ಷಣ ಇದೆ.

ಮಳೆಯ ಅಬ್ಬರದಿಂದ ಎನ್‌ಆರ್‌ಪುರ ತಾಲೂಕಿನ ಮಹಲ್ಗೋಡು ಸೇತುವೆ ಸಹ ಮುಳುಗಡೆಯಾಗಿದೆ. ಪರಿಣಾಮ ಬಾಳೆಹೊನ್ನೂರು-ಕಳಸ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಸೇತುವೆ ಜಾಲಾವೃತವಾಗಿದ್ದು ಜನ ಪರದಾಡುವಂತಾಗಿದೆ. ಶೃಂಗೇರಿ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಬಂದ್ ಇನ್ನೂ ಶೃಂಗೇರಿಯ  ನೆಮ್ಮಾರು ಬಳಿ ಹೆದ್ದಾರಿ 169ರಲ್ಲಿ ತುಂಗಾ ನದಿ ಸೇತುವೆ ಮೇಲೆ ಹರಿಯುತ್ತಿದ್ದು, ಶೃಂಗೇರಿ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ಇನ್ನೂ ನದಿಯ ಆರ್ಭಟ ಕಂಡು ವಾಹನ ಚಾಲಕರು ಭಯಗೊಂಡು ವಾಪಸ್ಸಾಗಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ಸೋಮವಾರ ಸಂಜೆ ಸುರಿದ ಭಾರೀ ಮಳೆಗೆ ತ್ರಿವೇಣಿ ಸಂಗಮ ಮುಳುಗಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ನಿನ್ನೆಯಿಂದ ಸುರಿದ ಭಾರಿ ಮಳೆಗೆ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ಭಾಗಮಂಡಲದ ಭಗಂಡೇಶ್ವರನ ಸನ್ನಿಧಿಯ  ಮುಂಭಾಗದ ಮೆಟ್ಟಿಲುವರೆಗೆ ನೀರು ಆವರಿಸಿದೆ.ಭಾಗಮಂಡಲ  ಸಂಪೂರ್ಣವಾಗಿ ಜಲಾವೃತವಾಗಿದೆ. ಕೆಳಭಾಗದ ನಾಪೋಕ್ಲು ರಸ್ತೆ ಮತ್ತು ಮಡಿಕೇರಿ ರಸ್ತೆ ಮುಳುಗಡೆಯಾಗಿದೆ. ಮಳೆ, ಗಾಳಿಯ ಆರ್ಭಟಕ್ಕೆ ಈ ಭಾಗದ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಘಟಪ್ರಭಾ ನದಿಯ  ಅಬ್ಬರಕ್ಕೆ ಗೋಕಾಕ್ ತಾಲೂಕಿನ ಮೆಳವಂಕಿ ಗ್ರಾಮದಲ್ಲಿರುವ 500ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿ ಊರಿಗೆ ಊರೇ ಜಲ ಪ್ರಳಯದಲ್ಲಿ  ಮುಳುಗಿಹೊಗಿದೆ. 500 ಮನೆಗಳ ಇಡಿ ಗ್ರಾಮವನ್ನು ಸುತ್ತುವರೆದಿರುವ ನದಿ ಹೊಲ ಗದ್ದೆ, ದೇವಸ್ಥಾನ ಮನೆಗಳು ನೀರಿನಲ್ಲಿ ತೇಲಿ ಅವಾಂತರ ಸೃಷ್ಟಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago