ಸಕಲೇಶಪುರ-ಸುಬ್ರಹ್ಮಣ್ಯ ರೈಲ್ವೇ ಹಳಿ ಮೇಲೆ ಭೂಕುಸಿತ | ಮಂಗಳೂರು-ಬೆಂಗಳೂರು ಎಲ್ಲಾ ರೈಲು ಸೇವೆ ರದ್ದು |

July 29, 2024
1:05 PM

ಕರಾವಳಿ ಹಾಗೂ ಮಲೆನಾಡಿನಲ್ಲಿ ಧಾರಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಘಾಟ್‌ ಪ್ರದೇಶಗಳ ರಸ್ತೆಗಳು ಭೂ ಕುಸಿತದಿಂದ(Land Slide) ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಕರಾವಳಿಯನ್ನು ಸಂಪರ್ಕಿಸುವ ಬಹುತೇಕ ಭೂ ಸಾರಿಗೆ ವ್ಯವಸ್ಥೆ ಕೈಕೊಟ್ಟಿದೆ. ಚಾರ್ಮಾಡಿ(Charmadi), ಶಿರಾಡಿ(Shiradi), ಮಡಿಕೇರಿ(Madikeri) ರಸ್ತೆಗಳ ಬಡಿಯಲ್ಲಿ ಗುಡ್ಡ ಕುಸಿಯುತ್ತಿರುವ ಹಿನ್ನೆಲೆ ಅಡಚಣೆ ಉಂಟಾಗಿದೆ. ಇದೀಗ ಮಂಗಳೂರು ಬೆಂಗಳೂರು(Mangaluru-Bengaluru) ರೈ ಸಂಚಾರದಲ್ಲೂ(Railway) ಹಳಿಗಳ ಮೇಲೆ ಮಣ್ಣು ಬಿದ್ದಿರುವ ಹಿನ್ನೆಲೆ ವತ್ಯಯ ಉಂಟಾಗಿದೆ. ಸಕಲೇಶಪುರ-ಸುಬ್ರಹ್ಮಣ್ಯ(Sakaleshapura-Subramanya) ರಸ್ತೆ ಘಾಟ್ ವಿಭಾಗದಲ್ಲಿ ಭೂಕುಸಿತದಿಂದ ಹಾನಿಗೊಳಗಾಗಿರುವ ಹಳಿಗಳ ಮರು ನಿರ್ಮಾಣ(Track Repair) ಕಾರ್ಯ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಮೂರು ದಿನಗಳ ಕಾಲ ಬೆಂಗಳೂರು-ಮಂಗಳೂರು ಸೆಕ್ಟರ್‌ನಲ್ಲಿ ಎಲ್ಲಾ ಸೇವೆಗಳನ್ನು ರದ್ದುಗೊಳಿಸಿದೆ.

Advertisement
Advertisement

ಶಿರಾಡಿ ಘಾಟ್ ಬಳಿಯ ಎಡಕುಮೇರಿ – ಕಡವಗರಳ್ಳಿ ಮಧ್ಯೆ ಭೂಕುಸಿತವಾಗಿದ್ದು, ಒಟ್ಟು 14 ರೈಲುಗಳು ಸಂಚಾರ ರದ್ದಾಗಿದೆ. 700 ಮಂದಿಯಿಂದ ಕಾಮಗಾರಿ ನಡೆಯುತ್ತಿದ್ದು, ಮಳೆಯಿಂದ ಕಾಮಗಾರಿಗೆ ತಡೆಯಾಗುತ್ತಿದೆ. ಆಗಸ್ಟ್ 4ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಇಲಾಖೆ ತಿಳಿಸಿದೆ.

News18 Kannada

ಆಗಸ್ಟ್ 4ರ ವರೆಗೆ ಒಟ್ಟು 14 ರೈಲು ಸೇವೆಯಲ್ಲಿ ವ್ಯತ್ಯಯ ಆಗಲಿದ್ದು, ಕೇರಳ, ಮುರುಡೇಶ್ವರ, ಮಂಗಳೂರು ಭಾಗಕ್ಕೆ ಸೇವೆ ಒದಗಿಸುವ ರೈಲು ಸಂಚಾರದಲ್ಲಿ ಅಡಚಣೆ ಆಗಲಿದೆ. ಈ ಮಾರ್ಗದ ಎಲ್ಲಾ ರೈಲು ಸಂಚಾರ ಸ್ಥಗಿತ, ದುರಸ್ಥಿ ಕಾರ್ಯ ಚುರುಕುಗೊಂಡಿದೆ. ಬೆಂಗಳೂರು – ಕಣ್ಣೂರು ಎಕ್ಸ್‌ಪ್ರೆಸ್‌ ರೈಲು ಆಗಸ್ಟ್‌ 4 ವರೆಗೆ ರದ್ದಾಗಿದೆ. ಮುರ್ಡೇಶ್ವರ – ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ಎಕ್ಸ್‌ಪ್ರೆಸ್‌ ಸೇರಿ, ಎಲ್ಲಾ ರೈಲುಗಳ ಸಂಚಾರ ಆಗಸ್ಟ್ ನಾಲ್ಕರವರೆಗೆ ರದ್ದಾಗಿದೆ.

ಪ್ರಯಾಣಿಕರೇ ಗಮನಿಸಿ :ರದ್ದಾಗಿರುವ ರೈಲು ಓಡಾಟದ ಪಟ್ಟಿನ ಇಲ್ಲಿದೆ

Advertisement

News18 Kannada

  • ಅಂತರ್ಜಾಲ ಮಾಹಿತಿ

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ
June 16, 2025
8:00 AM
by: ದಿವ್ಯ ಮಹೇಶ್
ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!
June 16, 2025
7:01 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |
June 15, 2025
10:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group