ಕರಾವಳಿ ಹಾಗೂ ಮಲೆನಾಡಿನಲ್ಲಿ ಧಾರಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಘಾಟ್ ಪ್ರದೇಶಗಳ ರಸ್ತೆಗಳು ಭೂ ಕುಸಿತದಿಂದ(Land Slide) ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಕರಾವಳಿಯನ್ನು ಸಂಪರ್ಕಿಸುವ ಬಹುತೇಕ ಭೂ ಸಾರಿಗೆ ವ್ಯವಸ್ಥೆ ಕೈಕೊಟ್ಟಿದೆ. ಚಾರ್ಮಾಡಿ(Charmadi), ಶಿರಾಡಿ(Shiradi), ಮಡಿಕೇರಿ(Madikeri) ರಸ್ತೆಗಳ ಬಡಿಯಲ್ಲಿ ಗುಡ್ಡ ಕುಸಿಯುತ್ತಿರುವ ಹಿನ್ನೆಲೆ ಅಡಚಣೆ ಉಂಟಾಗಿದೆ. ಇದೀಗ ಮಂಗಳೂರು ಬೆಂಗಳೂರು(Mangaluru-Bengaluru) ರೈ ಸಂಚಾರದಲ್ಲೂ(Railway) ಹಳಿಗಳ ಮೇಲೆ ಮಣ್ಣು ಬಿದ್ದಿರುವ ಹಿನ್ನೆಲೆ ವತ್ಯಯ ಉಂಟಾಗಿದೆ. ಸಕಲೇಶಪುರ-ಸುಬ್ರಹ್ಮಣ್ಯ(Sakaleshapura-Subramanya) ರಸ್ತೆ ಘಾಟ್ ವಿಭಾಗದಲ್ಲಿ ಭೂಕುಸಿತದಿಂದ ಹಾನಿಗೊಳಗಾಗಿರುವ ಹಳಿಗಳ ಮರು ನಿರ್ಮಾಣ(Track Repair) ಕಾರ್ಯ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಮೂರು ದಿನಗಳ ಕಾಲ ಬೆಂಗಳೂರು-ಮಂಗಳೂರು ಸೆಕ್ಟರ್ನಲ್ಲಿ ಎಲ್ಲಾ ಸೇವೆಗಳನ್ನು ರದ್ದುಗೊಳಿಸಿದೆ.
ಶಿರಾಡಿ ಘಾಟ್ ಬಳಿಯ ಎಡಕುಮೇರಿ – ಕಡವಗರಳ್ಳಿ ಮಧ್ಯೆ ಭೂಕುಸಿತವಾಗಿದ್ದು, ಒಟ್ಟು 14 ರೈಲುಗಳು ಸಂಚಾರ ರದ್ದಾಗಿದೆ. 700 ಮಂದಿಯಿಂದ ಕಾಮಗಾರಿ ನಡೆಯುತ್ತಿದ್ದು, ಮಳೆಯಿಂದ ಕಾಮಗಾರಿಗೆ ತಡೆಯಾಗುತ್ತಿದೆ. ಆಗಸ್ಟ್ 4ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಆಗಸ್ಟ್ 4ರ ವರೆಗೆ ಒಟ್ಟು 14 ರೈಲು ಸೇವೆಯಲ್ಲಿ ವ್ಯತ್ಯಯ ಆಗಲಿದ್ದು, ಕೇರಳ, ಮುರುಡೇಶ್ವರ, ಮಂಗಳೂರು ಭಾಗಕ್ಕೆ ಸೇವೆ ಒದಗಿಸುವ ರೈಲು ಸಂಚಾರದಲ್ಲಿ ಅಡಚಣೆ ಆಗಲಿದೆ. ಈ ಮಾರ್ಗದ ಎಲ್ಲಾ ರೈಲು ಸಂಚಾರ ಸ್ಥಗಿತ, ದುರಸ್ಥಿ ಕಾರ್ಯ ಚುರುಕುಗೊಂಡಿದೆ. ಬೆಂಗಳೂರು – ಕಣ್ಣೂರು ಎಕ್ಸ್ಪ್ರೆಸ್ ರೈಲು ಆಗಸ್ಟ್ 4 ವರೆಗೆ ರದ್ದಾಗಿದೆ. ಮುರ್ಡೇಶ್ವರ – ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್ಪ್ರೆಸ್ ಸೇರಿ, ಎಲ್ಲಾ ರೈಲುಗಳ ಸಂಚಾರ ಆಗಸ್ಟ್ ನಾಲ್ಕರವರೆಗೆ ರದ್ದಾಗಿದೆ.
ಪ್ರಯಾಣಿಕರೇ ಗಮನಿಸಿ :ರದ್ದಾಗಿರುವ ರೈಲು ಓಡಾಟದ ಪಟ್ಟಿನ ಇಲ್ಲಿದೆ
ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…
ಕಿಸಾನ್ ಸಮ್ಮಾನ್ ನಿಧಿಯಿಂದ 9 ಕೋಟಿ 50 ಲಕ್ಷ ರೈತರಿಗೆ 21 ಸಾವಿರ…
ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…
ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…
ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16 ಸಾವಿರದ 114…
ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…