Advertisement
MIRROR FOCUS

ಸಕಲೇಶಪುರ-ಸುಬ್ರಹ್ಮಣ್ಯ ರೈಲ್ವೇ ಹಳಿ ಮೇಲೆ ಭೂಕುಸಿತ | ಮಂಗಳೂರು-ಬೆಂಗಳೂರು ಎಲ್ಲಾ ರೈಲು ಸೇವೆ ರದ್ದು |

Share

ಕರಾವಳಿ ಹಾಗೂ ಮಲೆನಾಡಿನಲ್ಲಿ ಧಾರಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಘಾಟ್‌ ಪ್ರದೇಶಗಳ ರಸ್ತೆಗಳು ಭೂ ಕುಸಿತದಿಂದ(Land Slide) ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಕರಾವಳಿಯನ್ನು ಸಂಪರ್ಕಿಸುವ ಬಹುತೇಕ ಭೂ ಸಾರಿಗೆ ವ್ಯವಸ್ಥೆ ಕೈಕೊಟ್ಟಿದೆ. ಚಾರ್ಮಾಡಿ(Charmadi), ಶಿರಾಡಿ(Shiradi), ಮಡಿಕೇರಿ(Madikeri) ರಸ್ತೆಗಳ ಬಡಿಯಲ್ಲಿ ಗುಡ್ಡ ಕುಸಿಯುತ್ತಿರುವ ಹಿನ್ನೆಲೆ ಅಡಚಣೆ ಉಂಟಾಗಿದೆ. ಇದೀಗ ಮಂಗಳೂರು ಬೆಂಗಳೂರು(Mangaluru-Bengaluru) ರೈ ಸಂಚಾರದಲ್ಲೂ(Railway) ಹಳಿಗಳ ಮೇಲೆ ಮಣ್ಣು ಬಿದ್ದಿರುವ ಹಿನ್ನೆಲೆ ವತ್ಯಯ ಉಂಟಾಗಿದೆ. ಸಕಲೇಶಪುರ-ಸುಬ್ರಹ್ಮಣ್ಯ(Sakaleshapura-Subramanya) ರಸ್ತೆ ಘಾಟ್ ವಿಭಾಗದಲ್ಲಿ ಭೂಕುಸಿತದಿಂದ ಹಾನಿಗೊಳಗಾಗಿರುವ ಹಳಿಗಳ ಮರು ನಿರ್ಮಾಣ(Track Repair) ಕಾರ್ಯ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಮೂರು ದಿನಗಳ ಕಾಲ ಬೆಂಗಳೂರು-ಮಂಗಳೂರು ಸೆಕ್ಟರ್‌ನಲ್ಲಿ ಎಲ್ಲಾ ಸೇವೆಗಳನ್ನು ರದ್ದುಗೊಳಿಸಿದೆ.

Advertisement
Advertisement

ಶಿರಾಡಿ ಘಾಟ್ ಬಳಿಯ ಎಡಕುಮೇರಿ – ಕಡವಗರಳ್ಳಿ ಮಧ್ಯೆ ಭೂಕುಸಿತವಾಗಿದ್ದು, ಒಟ್ಟು 14 ರೈಲುಗಳು ಸಂಚಾರ ರದ್ದಾಗಿದೆ. 700 ಮಂದಿಯಿಂದ ಕಾಮಗಾರಿ ನಡೆಯುತ್ತಿದ್ದು, ಮಳೆಯಿಂದ ಕಾಮಗಾರಿಗೆ ತಡೆಯಾಗುತ್ತಿದೆ. ಆಗಸ್ಟ್ 4ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಇಲಾಖೆ ತಿಳಿಸಿದೆ.

Advertisement

ಆಗಸ್ಟ್ 4ರ ವರೆಗೆ ಒಟ್ಟು 14 ರೈಲು ಸೇವೆಯಲ್ಲಿ ವ್ಯತ್ಯಯ ಆಗಲಿದ್ದು, ಕೇರಳ, ಮುರುಡೇಶ್ವರ, ಮಂಗಳೂರು ಭಾಗಕ್ಕೆ ಸೇವೆ ಒದಗಿಸುವ ರೈಲು ಸಂಚಾರದಲ್ಲಿ ಅಡಚಣೆ ಆಗಲಿದೆ. ಈ ಮಾರ್ಗದ ಎಲ್ಲಾ ರೈಲು ಸಂಚಾರ ಸ್ಥಗಿತ, ದುರಸ್ಥಿ ಕಾರ್ಯ ಚುರುಕುಗೊಂಡಿದೆ. ಬೆಂಗಳೂರು – ಕಣ್ಣೂರು ಎಕ್ಸ್‌ಪ್ರೆಸ್‌ ರೈಲು ಆಗಸ್ಟ್‌ 4 ವರೆಗೆ ರದ್ದಾಗಿದೆ. ಮುರ್ಡೇಶ್ವರ – ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ಎಕ್ಸ್‌ಪ್ರೆಸ್‌ ಸೇರಿ, ಎಲ್ಲಾ ರೈಲುಗಳ ಸಂಚಾರ ಆಗಸ್ಟ್ ನಾಲ್ಕರವರೆಗೆ ರದ್ದಾಗಿದೆ.

Advertisement

ಪ್ರಯಾಣಿಕರೇ ಗಮನಿಸಿ :ರದ್ದಾಗಿರುವ ರೈಲು ಓಡಾಟದ ಪಟ್ಟಿನ ಇಲ್ಲಿದೆ

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

8 hours ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

10 hours ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

10 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

10 hours ago

ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…

11 hours ago