MIRROR FOCUS

ಸಕಲೇಶಪುರ-ಸುಬ್ರಹ್ಮಣ್ಯ ರೈಲ್ವೇ ಹಳಿ ಮೇಲೆ ಭೂಕುಸಿತ | ಮಂಗಳೂರು-ಬೆಂಗಳೂರು ಎಲ್ಲಾ ರೈಲು ಸೇವೆ ರದ್ದು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರಾವಳಿ ಹಾಗೂ ಮಲೆನಾಡಿನಲ್ಲಿ ಧಾರಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಘಾಟ್‌ ಪ್ರದೇಶಗಳ ರಸ್ತೆಗಳು ಭೂ ಕುಸಿತದಿಂದ(Land Slide) ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಕರಾವಳಿಯನ್ನು ಸಂಪರ್ಕಿಸುವ ಬಹುತೇಕ ಭೂ ಸಾರಿಗೆ ವ್ಯವಸ್ಥೆ ಕೈಕೊಟ್ಟಿದೆ. ಚಾರ್ಮಾಡಿ(Charmadi), ಶಿರಾಡಿ(Shiradi), ಮಡಿಕೇರಿ(Madikeri) ರಸ್ತೆಗಳ ಬಡಿಯಲ್ಲಿ ಗುಡ್ಡ ಕುಸಿಯುತ್ತಿರುವ ಹಿನ್ನೆಲೆ ಅಡಚಣೆ ಉಂಟಾಗಿದೆ. ಇದೀಗ ಮಂಗಳೂರು ಬೆಂಗಳೂರು(Mangaluru-Bengaluru) ರೈ ಸಂಚಾರದಲ್ಲೂ(Railway) ಹಳಿಗಳ ಮೇಲೆ ಮಣ್ಣು ಬಿದ್ದಿರುವ ಹಿನ್ನೆಲೆ ವತ್ಯಯ ಉಂಟಾಗಿದೆ. ಸಕಲೇಶಪುರ-ಸುಬ್ರಹ್ಮಣ್ಯ(Sakaleshapura-Subramanya) ರಸ್ತೆ ಘಾಟ್ ವಿಭಾಗದಲ್ಲಿ ಭೂಕುಸಿತದಿಂದ ಹಾನಿಗೊಳಗಾಗಿರುವ ಹಳಿಗಳ ಮರು ನಿರ್ಮಾಣ(Track Repair) ಕಾರ್ಯ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಮೂರು ದಿನಗಳ ಕಾಲ ಬೆಂಗಳೂರು-ಮಂಗಳೂರು ಸೆಕ್ಟರ್‌ನಲ್ಲಿ ಎಲ್ಲಾ ಸೇವೆಗಳನ್ನು ರದ್ದುಗೊಳಿಸಿದೆ.

Advertisement
Advertisement

ಶಿರಾಡಿ ಘಾಟ್ ಬಳಿಯ ಎಡಕುಮೇರಿ – ಕಡವಗರಳ್ಳಿ ಮಧ್ಯೆ ಭೂಕುಸಿತವಾಗಿದ್ದು, ಒಟ್ಟು 14 ರೈಲುಗಳು ಸಂಚಾರ ರದ್ದಾಗಿದೆ. 700 ಮಂದಿಯಿಂದ ಕಾಮಗಾರಿ ನಡೆಯುತ್ತಿದ್ದು, ಮಳೆಯಿಂದ ಕಾಮಗಾರಿಗೆ ತಡೆಯಾಗುತ್ತಿದೆ. ಆಗಸ್ಟ್ 4ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಆಗಸ್ಟ್ 4ರ ವರೆಗೆ ಒಟ್ಟು 14 ರೈಲು ಸೇವೆಯಲ್ಲಿ ವ್ಯತ್ಯಯ ಆಗಲಿದ್ದು, ಕೇರಳ, ಮುರುಡೇಶ್ವರ, ಮಂಗಳೂರು ಭಾಗಕ್ಕೆ ಸೇವೆ ಒದಗಿಸುವ ರೈಲು ಸಂಚಾರದಲ್ಲಿ ಅಡಚಣೆ ಆಗಲಿದೆ. ಈ ಮಾರ್ಗದ ಎಲ್ಲಾ ರೈಲು ಸಂಚಾರ ಸ್ಥಗಿತ, ದುರಸ್ಥಿ ಕಾರ್ಯ ಚುರುಕುಗೊಂಡಿದೆ. ಬೆಂಗಳೂರು – ಕಣ್ಣೂರು ಎಕ್ಸ್‌ಪ್ರೆಸ್‌ ರೈಲು ಆಗಸ್ಟ್‌ 4 ವರೆಗೆ ರದ್ದಾಗಿದೆ. ಮುರ್ಡೇಶ್ವರ – ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ಎಕ್ಸ್‌ಪ್ರೆಸ್‌ ಸೇರಿ, ಎಲ್ಲಾ ರೈಲುಗಳ ಸಂಚಾರ ಆಗಸ್ಟ್ ನಾಲ್ಕರವರೆಗೆ ರದ್ದಾಗಿದೆ.

ಪ್ರಯಾಣಿಕರೇ ಗಮನಿಸಿ :ರದ್ದಾಗಿರುವ ರೈಲು ಓಡಾಟದ ಪಟ್ಟಿನ ಇಲ್ಲಿದೆ

Advertisement

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

54 minutes ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

10 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

20 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

22 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

1 day ago