Advertisement
MIRROR FOCUS

ಸಕಲೇಶಪುರ-ಸುಬ್ರಹ್ಮಣ್ಯ ರೈಲ್ವೇ ಹಳಿ ಮೇಲೆ ಭೂಕುಸಿತ | ಮಂಗಳೂರು-ಬೆಂಗಳೂರು ಎಲ್ಲಾ ರೈಲು ಸೇವೆ ರದ್ದು |

Share

ಕರಾವಳಿ ಹಾಗೂ ಮಲೆನಾಡಿನಲ್ಲಿ ಧಾರಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಘಾಟ್‌ ಪ್ರದೇಶಗಳ ರಸ್ತೆಗಳು ಭೂ ಕುಸಿತದಿಂದ(Land Slide) ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಕರಾವಳಿಯನ್ನು ಸಂಪರ್ಕಿಸುವ ಬಹುತೇಕ ಭೂ ಸಾರಿಗೆ ವ್ಯವಸ್ಥೆ ಕೈಕೊಟ್ಟಿದೆ. ಚಾರ್ಮಾಡಿ(Charmadi), ಶಿರಾಡಿ(Shiradi), ಮಡಿಕೇರಿ(Madikeri) ರಸ್ತೆಗಳ ಬಡಿಯಲ್ಲಿ ಗುಡ್ಡ ಕುಸಿಯುತ್ತಿರುವ ಹಿನ್ನೆಲೆ ಅಡಚಣೆ ಉಂಟಾಗಿದೆ. ಇದೀಗ ಮಂಗಳೂರು ಬೆಂಗಳೂರು(Mangaluru-Bengaluru) ರೈ ಸಂಚಾರದಲ್ಲೂ(Railway) ಹಳಿಗಳ ಮೇಲೆ ಮಣ್ಣು ಬಿದ್ದಿರುವ ಹಿನ್ನೆಲೆ ವತ್ಯಯ ಉಂಟಾಗಿದೆ. ಸಕಲೇಶಪುರ-ಸುಬ್ರಹ್ಮಣ್ಯ(Sakaleshapura-Subramanya) ರಸ್ತೆ ಘಾಟ್ ವಿಭಾಗದಲ್ಲಿ ಭೂಕುಸಿತದಿಂದ ಹಾನಿಗೊಳಗಾಗಿರುವ ಹಳಿಗಳ ಮರು ನಿರ್ಮಾಣ(Track Repair) ಕಾರ್ಯ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಮೂರು ದಿನಗಳ ಕಾಲ ಬೆಂಗಳೂರು-ಮಂಗಳೂರು ಸೆಕ್ಟರ್‌ನಲ್ಲಿ ಎಲ್ಲಾ ಸೇವೆಗಳನ್ನು ರದ್ದುಗೊಳಿಸಿದೆ.

ಶಿರಾಡಿ ಘಾಟ್ ಬಳಿಯ ಎಡಕುಮೇರಿ – ಕಡವಗರಳ್ಳಿ ಮಧ್ಯೆ ಭೂಕುಸಿತವಾಗಿದ್ದು, ಒಟ್ಟು 14 ರೈಲುಗಳು ಸಂಚಾರ ರದ್ದಾಗಿದೆ. 700 ಮಂದಿಯಿಂದ ಕಾಮಗಾರಿ ನಡೆಯುತ್ತಿದ್ದು, ಮಳೆಯಿಂದ ಕಾಮಗಾರಿಗೆ ತಡೆಯಾಗುತ್ತಿದೆ. ಆಗಸ್ಟ್ 4ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಆಗಸ್ಟ್ 4ರ ವರೆಗೆ ಒಟ್ಟು 14 ರೈಲು ಸೇವೆಯಲ್ಲಿ ವ್ಯತ್ಯಯ ಆಗಲಿದ್ದು, ಕೇರಳ, ಮುರುಡೇಶ್ವರ, ಮಂಗಳೂರು ಭಾಗಕ್ಕೆ ಸೇವೆ ಒದಗಿಸುವ ರೈಲು ಸಂಚಾರದಲ್ಲಿ ಅಡಚಣೆ ಆಗಲಿದೆ. ಈ ಮಾರ್ಗದ ಎಲ್ಲಾ ರೈಲು ಸಂಚಾರ ಸ್ಥಗಿತ, ದುರಸ್ಥಿ ಕಾರ್ಯ ಚುರುಕುಗೊಂಡಿದೆ. ಬೆಂಗಳೂರು – ಕಣ್ಣೂರು ಎಕ್ಸ್‌ಪ್ರೆಸ್‌ ರೈಲು ಆಗಸ್ಟ್‌ 4 ವರೆಗೆ ರದ್ದಾಗಿದೆ. ಮುರ್ಡೇಶ್ವರ – ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ಎಕ್ಸ್‌ಪ್ರೆಸ್‌ ಸೇರಿ, ಎಲ್ಲಾ ರೈಲುಗಳ ಸಂಚಾರ ಆಗಸ್ಟ್ ನಾಲ್ಕರವರೆಗೆ ರದ್ದಾಗಿದೆ.

ಪ್ರಯಾಣಿಕರೇ ಗಮನಿಸಿ :ರದ್ದಾಗಿರುವ ರೈಲು ಓಡಾಟದ ಪಟ್ಟಿನ ಇಲ್ಲಿದೆ

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

4 days ago