Advertisement
MIRROR FOCUS

ಚಿಕ್ಕಮಗಳೂರು ಜಿಲ್ಲೆಯ 88 ಅಪಾಯಕಾರಿ ಸ್ಥಳಗಳ ಬಗ್ಗೆ ವರದಿ | ಭವಿಷ್ಯದಲ್ಲಿ ಭೂಕುಸಿತಗಳನ್ನು ತಪ್ಪಿಸಲು ಏನೇನು ಕ್ರಮ ಕೈಗೊಳ್ಳಬೇಕು ? |

Share

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಮತ್ತು ಚಾರ್ಮಾಡಿ ಘಾಟ್‌ನಲ್ಲಿನ ಇಳಿಜಾರು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಭೂವಿಜ್ಞಾನ ಇಲಾಖೆ ಸಮೀಕ್ಷೆಯ ತಜ್ಞರು ವರದಿ ಮಾಡಿದ್ದಾರೆ.  ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಇಳಿಜಾರಿನ  ಪ್ರದೇಶವನ್ನು ಅಧ್ಯಯನ ಮಾಡಿದ ನಂತರ ವರದಿಯನ್ನು ಸಲ್ಲಿಸಿದೆ ಮತ್ತು ಭವಿಷ್ಯದಲ್ಲಿ ಭೂಕುಸಿತಗಳನ್ನು ತಪ್ಪಿಸಲು ಹಲವು ಕ್ರಮಗಳನ್ನು ಶಿಫಾರಸು ಮಾಡಿದೆ.…..ಮುಂದೆ ಓದಿ….

Advertisement
Advertisement

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ  ಜಿಲ್ಲೆಯ ಪರಿಸರ ಸೂಕ್ಷ್ಮ ಪ್ರದೇಶಗಳ ಬಗ್ಗೆ  ಇಲಾಖೆಯ ತಂಡ ಸಮೀಕ್ಷೆ ನಡೆಸಿದೆ. ಇದೀಗ ವರದಿಯನ್ನು ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗಿದೆ. ವರದಿಯಲ್ಲಿ ಪ್ರಮುಖವಾಗಿ ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದರ ನಿಯಂತ್ರಣವೇ ಭೂಕುಸಿತಗಳ ತಡೆಗೆ ಪ್ರಮುಖವಾದ ಪರಿಹಾರ.

ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲುಗಳಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವಂತೆ ವರದಿಯಲ್ಲಿ ಸಲಹೆ ನೀಡಲಾಗಿದೆ. ಶೇ 80ರಷ್ಟು ಅವೈಜ್ಞಾನಿಕ ಕಾಮಗಾರಿಯಿಂದ ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು ಭಾಗದಲ್ಲಿ ಭೂಕುಸಿತದ ಭೀತಿ ಉಂಟಾಗಿದೆ ಎಂದು ವರದಿ ತಿಳಿಸಿದೆ.

ಭೂಕುಸಿತದ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಡಳಿತವು ಜಿಯೋಲಾಜಿಕಲ್ ಸರ್ವೇ ಟೀಮ್  ಅಭಿಪ್ರಾಯವನ್ನು ಕೇಳಿತ್ತು. ಆಗಸ್ಟ್ 10 ಮತ್ತು 12 ರಂದು ಚಿಕ್ಕಮಗಳೂರು, ಕಳಸ, ಶೃಂಗೇರಿ, ಮೂಡಿಗೆರೆ ಮತ್ತು ಕೊಪ್ಪ ತಾಲೂಕಿನಲ್ಲಿರುವ ಸ್ಥಳಗಳಿಗೆ  ತಜ್ಞರ ತಂಡ ಭೇಟಿ ನೀಡಿತ್ತು. ಅವರು ಸ್ಥಳಗಳನ್ನು ಅಧ್ಯಯನ ಮಾಡಿದರು ಮತ್ತು ಭೂಕುಸಿತಕ್ಕೆ ಕಾರಣಗಳ ಬಗ್ಗೆ ಅವಲೋಕನ ಮಾಡಿದರು. ನಿರ್ದೇಶಕರಾದ ಡಾ.ಆರ್.ಸಜೀವ್ ಅವರ ಮೇಲ್ವಿಚಾರಣೆಯಲ್ಲಿ ಹಿರಿಯ ಭೂವಿಜ್ಞಾನಿಗಳಾದ ಸೆಂಥಿಲ್ ಕುಮಾರ್ ಕೆ. ಮತ್ತು ಸೋವೇಶ್ ದುಲಾಲ್ ಮುದುಲಿ ವರದಿಯನ್ನು ಸಿದ್ಧಪಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ 88 ಅಪಾಯಕಾರಿ ಸ್ಥಳಗಳ ಬಗ್ಗೆ ವರದಿಯಲ್ಲಿ ಮಾಹಿತಿ ನೀಡಲಾಗಿದೆ. ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 88 ಅತ್ಯಂತ ಅಪಾಯಕಾರಿ ಸ್ಥಳಗಳಿವೆ ಎಂದು ಉಲ್ಲೇಖಿಸಿದೆ. 80% ಅವೈಜ್ಞಾನಿಕ ಕಾಮಗಾರಿಯಿಂದಲೇ ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು ಭಾಗದಲ್ಲಿ ಕುಸಿತ ಉಂಟಾಗುತ್ತಿದೆ ಎಂಬ ಅಂಶ ಪತ್ತೆಯಾಗಿದೆ.

The Geological Survey of India has identified the potential for landslides in the hilly regions of Mullaiyanagari, Bababudangiri, and Charmadi Ghat in the Chikmagalur district.After conducting a study of slope areas in various locations within the district, a report has been submitted outlining recommendations to prevent future landslides.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

19 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

19 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

19 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

20 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

20 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

20 hours ago