Advertisement
MIRROR FOCUS

ಚಿಕ್ಕಮಗಳೂರು ಜಿಲ್ಲೆಯ 88 ಅಪಾಯಕಾರಿ ಸ್ಥಳಗಳ ಬಗ್ಗೆ ವರದಿ | ಭವಿಷ್ಯದಲ್ಲಿ ಭೂಕುಸಿತಗಳನ್ನು ತಪ್ಪಿಸಲು ಏನೇನು ಕ್ರಮ ಕೈಗೊಳ್ಳಬೇಕು ? |

Share

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಮತ್ತು ಚಾರ್ಮಾಡಿ ಘಾಟ್‌ನಲ್ಲಿನ ಇಳಿಜಾರು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಭೂವಿಜ್ಞಾನ ಇಲಾಖೆ ಸಮೀಕ್ಷೆಯ ತಜ್ಞರು ವರದಿ ಮಾಡಿದ್ದಾರೆ.  ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಇಳಿಜಾರಿನ  ಪ್ರದೇಶವನ್ನು ಅಧ್ಯಯನ ಮಾಡಿದ ನಂತರ ವರದಿಯನ್ನು ಸಲ್ಲಿಸಿದೆ ಮತ್ತು ಭವಿಷ್ಯದಲ್ಲಿ ಭೂಕುಸಿತಗಳನ್ನು ತಪ್ಪಿಸಲು ಹಲವು ಕ್ರಮಗಳನ್ನು ಶಿಫಾರಸು ಮಾಡಿದೆ.…..ಮುಂದೆ ಓದಿ….

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ  ಜಿಲ್ಲೆಯ ಪರಿಸರ ಸೂಕ್ಷ್ಮ ಪ್ರದೇಶಗಳ ಬಗ್ಗೆ  ಇಲಾಖೆಯ ತಂಡ ಸಮೀಕ್ಷೆ ನಡೆಸಿದೆ. ಇದೀಗ ವರದಿಯನ್ನು ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗಿದೆ. ವರದಿಯಲ್ಲಿ ಪ್ರಮುಖವಾಗಿ ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದರ ನಿಯಂತ್ರಣವೇ ಭೂಕುಸಿತಗಳ ತಡೆಗೆ ಪ್ರಮುಖವಾದ ಪರಿಹಾರ.

ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲುಗಳಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವಂತೆ ವರದಿಯಲ್ಲಿ ಸಲಹೆ ನೀಡಲಾಗಿದೆ. ಶೇ 80ರಷ್ಟು ಅವೈಜ್ಞಾನಿಕ ಕಾಮಗಾರಿಯಿಂದ ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು ಭಾಗದಲ್ಲಿ ಭೂಕುಸಿತದ ಭೀತಿ ಉಂಟಾಗಿದೆ ಎಂದು ವರದಿ ತಿಳಿಸಿದೆ.

ಭೂಕುಸಿತದ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಡಳಿತವು ಜಿಯೋಲಾಜಿಕಲ್ ಸರ್ವೇ ಟೀಮ್  ಅಭಿಪ್ರಾಯವನ್ನು ಕೇಳಿತ್ತು. ಆಗಸ್ಟ್ 10 ಮತ್ತು 12 ರಂದು ಚಿಕ್ಕಮಗಳೂರು, ಕಳಸ, ಶೃಂಗೇರಿ, ಮೂಡಿಗೆರೆ ಮತ್ತು ಕೊಪ್ಪ ತಾಲೂಕಿನಲ್ಲಿರುವ ಸ್ಥಳಗಳಿಗೆ  ತಜ್ಞರ ತಂಡ ಭೇಟಿ ನೀಡಿತ್ತು. ಅವರು ಸ್ಥಳಗಳನ್ನು ಅಧ್ಯಯನ ಮಾಡಿದರು ಮತ್ತು ಭೂಕುಸಿತಕ್ಕೆ ಕಾರಣಗಳ ಬಗ್ಗೆ ಅವಲೋಕನ ಮಾಡಿದರು. ನಿರ್ದೇಶಕರಾದ ಡಾ.ಆರ್.ಸಜೀವ್ ಅವರ ಮೇಲ್ವಿಚಾರಣೆಯಲ್ಲಿ ಹಿರಿಯ ಭೂವಿಜ್ಞಾನಿಗಳಾದ ಸೆಂಥಿಲ್ ಕುಮಾರ್ ಕೆ. ಮತ್ತು ಸೋವೇಶ್ ದುಲಾಲ್ ಮುದುಲಿ ವರದಿಯನ್ನು ಸಿದ್ಧಪಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ 88 ಅಪಾಯಕಾರಿ ಸ್ಥಳಗಳ ಬಗ್ಗೆ ವರದಿಯಲ್ಲಿ ಮಾಹಿತಿ ನೀಡಲಾಗಿದೆ. ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 88 ಅತ್ಯಂತ ಅಪಾಯಕಾರಿ ಸ್ಥಳಗಳಿವೆ ಎಂದು ಉಲ್ಲೇಖಿಸಿದೆ. 80% ಅವೈಜ್ಞಾನಿಕ ಕಾಮಗಾರಿಯಿಂದಲೇ ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು ಭಾಗದಲ್ಲಿ ಕುಸಿತ ಉಂಟಾಗುತ್ತಿದೆ ಎಂಬ ಅಂಶ ಪತ್ತೆಯಾಗಿದೆ.

The Geological Survey of India has identified the potential for landslides in the hilly regions of Mullaiyanagari, Bababudangiri, and Charmadi Ghat in the Chikmagalur district.After conducting a study of slope areas in various locations within the district, a report has been submitted outlining recommendations to prevent future landslides.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 01-08-2026 | ಕರಾವಳಿಯ-ಮಲೆನಾಡಲ್ಲಿ ಮಳೆ ಹೆಚ್ಚಳಕ್ಕೆ ಕಾರಣವೇನು..? – ಆಗಸ್ಟ್ 3 ರಿಂದ ಮಳೆ ಕಡಿಮೆ ಸಾಧ್ಯತೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 2ರವರೆಗೆ ಬಿಟ್ಟು ಬಿಟ್ಟು ಮಳೆಯಾಗಲಿದ್ದು, ಆಗಸ್ಟ್ 3ರಿಂದ…

2 hours ago

ಪಶ್ಚಿಮ ಘಟ್ಟಕ್ಕೆ ಮತ್ತೆ ಕೇಂದ್ರದ ಹೊಸ ನೋಟಿಫಿಕೇಶನ್ – ಕರ್ನಾಟಕದ ಸಾವಿರಾರು ಗ್ರಾಮಗಳ ಮೇಲೆ ಪರಿಣಾಮವೇ?

ಪಶ್ಚಿಮ ಘಟ್ಟದ 56,825 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವಾಗಿ ಘೋಷಿಸಲು…

5 hours ago

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

16 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

17 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

19 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

19 hours ago