ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

March 13, 2025
11:05 PM

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ “ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007” ನೀಡಿದೆ ಎಂದು ಕೃಷ್ಣ ಬೈರೇಗೌಡ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ.

“ಹಿರಿಯ ನಾಗರೀಕರ ದೂರು ಸಾಬೀತಾದರೆ, ತಂದೆ ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ವಿಲ್ ಅಥವಾ ದಾನಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ. ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ತಮ್ಮ ವಿಭಾಗದ ಅನ್ಯ ಯೋಜನೆಗಳ ಮಾಹಿತಿ ನೀಡಿದ ಸಚಿವರು, ಗ್ರಾಮ ಹಾಗೂ ತಾಲ್ಲೂಕು ಮಟ್ಟದ ಭೂದಾಖಲೆಗಳನ್ನು ತಾಳೆ ಮಾಡಿ ಕ್ರಮಬದ್ಧಗೊಳಿಸುವ ಜಮಾಬಂದಿ ಪ್ರಕ್ರಿಯೆಯನ್ನು ವೇಗವಾಗಿ ನಿರ್ವಹಿಸಲು ಇ-ಜಮಾಬಂದಿ ತಂತ್ರಾಂಶವನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ. ಕುಡಿಯುವ ನೀರು, ವಸತಿ, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ನರೇಗಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ದೃಢಪಡಿಸುವುದು ಹಾಗೂ ಗ್ರಾಮ ಪಂಚಾಯತಿ ಆಡಳಿತದಲ್ಲಿ ಪಾರದರ್ಶಕತೆ ತರುವುದು ಜಮಾಬಂದಿ ಯೋಜನೆಯ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror