Advertisement
ಸುದ್ದಿಗಳು

ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ | ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದು ಅಂಬೇಡ್ಕರ್

Share

ಪ್ರಜಾಧ್ವನಿ ಕರ್ನಾಟಕ ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯೋತ್ಸವದ ಭಾಗವಾಗಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ  ನ್ಯಾಯವಾದಿಗಳಾದ  ದಿನೇಶ್ ಹೆಗ್ಡೆ ಉಳೆಪಾಡಿ, “ಹಿಂದೆ ಶಿಕ್ಷಣ,ಜಮೀನು,ಕಾನೂನು ಇವೆಲ್ಲಾ ಕೆಲವರ ಮಾತ್ರ ಅಥವಾ ಆರ್ಥಿಕವಾಗಿ ಬಲಾಡ್ಯರಾಗಿದ್ದವರ ಸ್ವತ್ತಾಗಿತ್ತು, ಇವತ್ತು 16 ವರ್ಷದವರೆಗಿನ ಮಕ್ಕಳಿಗೆ ಶಿಕ್ಷಣ ಕಡ್ಡಾಯವಾಗಿ ಕಾನೂನು ರಚನೆಯಾಗಿದೆ. ಆರ್ಥಿಕವಾಗಿ ಬಲಾಡ್ಯರಾಗಿದ್ದವರಲ್ಲಿ ಮಾತ್ರ ಇದ್ದ ಜಮೀನು ದಿವಂಗತ ಇಂದಿರಾ ಗಾಂಧಿಯವರ ಮೂಲಕ ಒಂದು ಹಂತದವರೆಗೆ ಉಳುವವನೇ ಹೊಲದೊಡೆಯನಾಗುವ ಮೂಲಕ ಹೆಚ್ಚಿನವರಿಗೆ ಜಮೀನು ದೊರಕುವಂತಾಯಿತು. ಯಾವನೇ ಒಬ್ಬ ವ್ಯಕ್ತಿ ತನಗೆ ಅನ್ಯಾಯವಾದರೆ ಕೇವಲ ಒಂದು ಪತ್ರ ಬರೆಯುವುದರ ಮುಖೇನೆ ಹೈಕೋರ್ಟ್, ಸುಪ್ರೀಂ ಕೋರ್ಟು ಗಳು ಆ ವ್ಯಕ್ತಿಯ ಬಳಿಗೇ ಬರುವ ವ್ಯವಸ್ತೆಯಿದೆ. ಇದಕ್ಕೆಲ್ಲಾ ಕಾರಣವಾಗಿದ್ದೇ ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ನಮ್ಮ ಸಂವಿದಾನ ಎಂದರು.

ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಪ್ರಜಾಧ್ವನಿಯ ಗೌರವ ಸದಸ್ಯರು ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ನಿರ್ದೇಶಕರಾದ  ಕೆ.ಪಿ ಜಾನಿ ಇವರು ಪ್ರಸ್ತಾವಿಕ ಮಾತುಗಳನ್ನಾಡಿ, “ನಮ್ಮ ಸ್ವಾತಂತ್ರ್ಯ ಹೋರಾಟಗಾರರೆಲ್ಲರ ಮನದಾಳದ ಆಶಯವನ್ನು ಇಡಿ ಜಗತ್ತು ಸುತ್ತಾಡಿ ಎಲ್ಲಾ ರಾಷ್ಟ್ರಗಳ ಸಂವಿಧಾನವನ್ನು ಅಧ್ಯಾಯನ ಮಾಡಿ ಅಕ್ಷರಗಳ ಮೂಲಕ ಜೋಡಿಸಿ ಒಂದು ಪುಸ್ತಕದ ರೂಪದಲ್ಲಿ ಜಗತ್ತಿನ ಶ್ರೇಷ್ಠ ಸಂವಿದಾನವನ್ನಾಗಿ ಡಾಕ್ಟರ್ ಬಾಬಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಅರ್ಪಿಸಿದರು ಎಂದು ಹೇಳಿದರು.

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಇದರ ಮುಖ್ಯೋಪಾಧ್ಯಾಯರಾದ ಸೋಮಶೇಖರ್. ಪಿ  ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಜಾಧ್ವನಿ ಕರ್ನಾಟಕದ ಸಂಚಾಲಕರಾದ  ಗೋಪಾಲ್ ಪೆರಾಜೆ  ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾಂತಿ ಬಿ.ಎಸ್  ಸ್ವಾಗತಿಸಿ ಪ್ರಾಧ್ಯಾಪಕರಾದ ಸುರೇಶ್ ವಾಗ್ಲೆ ಇವರು ವಂದಿಸಿದರು.ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕರಾದ  ಪದ್ಮಕುಮಾರ್  ಕಾರ್ಯಕ್ರಮ ನಿರೂಪಿಸಿದರು.

ಪ್ರಜಾಧ್ವನಿ ಕರ್ನಾಟಕ ಇದರ ಗೌರವ ಸದಸ್ಯರು, ಸುಳ್ಯ ನಗರಪಂಚಾಯತ್ ಸದಸ್ಯ ಉಮ್ಮರ್ ಕೆ.ಎಸ್,ರಾಜು ಪಂಡಿತ್ ,ಸಂಪಾಜೆ ಗ್ರಾಮಪಂಚಾಯತ್ ಸದಸ್ಯರಾದ  ಲೆಸ್ಸಿ ಮೊನಾಲಿಸ,ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಪ್ರಮಿಳಾ ಪೆಲ್ತಡ್ಕ,ಐ.ಎನ್.ಟಿ.ಯು.ಸಿ ತಾಲೂಕು ಅಧ್ಯಕ್ಷರಾದ  ಶಾಫಿ ಕುತ್ತಮೊಟ್ಟೆ, ಮಹೇಶ್ ಬೆಳ್ಳಾರ್ಕರ್, ಕೇಶವ ಪಾಟಾಳಿ, ಭರತ್ ಕುಕ್ಕುಜಡ್ಕ , ಸಾಹುಕಾರ್ ಅಶ್ರಫ್ , ದಿವಾಕರ್ ಪೈ, ಲಲನ ಕೆ.ಆರ್, ಸಿಲ್ವೆಸ್ಟರ್ ಡಿಸೋಜ, ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಶಿಕ್ಷಕರು ಸಿಬ್ಬಂದಿ ವರ್ಗ,ಮತ್ತಿತರರು  ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

6 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago