ಪ್ರಜಾಧ್ವನಿ ಕರ್ನಾಟಕ ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯೋತ್ಸವದ ಭಾಗವಾಗಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ನ್ಯಾಯವಾದಿಗಳಾದ ದಿನೇಶ್ ಹೆಗ್ಡೆ ಉಳೆಪಾಡಿ, “ಹಿಂದೆ ಶಿಕ್ಷಣ,ಜಮೀನು,ಕಾನೂನು ಇವೆಲ್ಲಾ ಕೆಲವರ ಮಾತ್ರ ಅಥವಾ ಆರ್ಥಿಕವಾಗಿ ಬಲಾಡ್ಯರಾಗಿದ್ದವರ ಸ್ವತ್ತಾಗಿತ್ತು, ಇವತ್ತು 16 ವರ್ಷದವರೆಗಿನ ಮಕ್ಕಳಿಗೆ ಶಿಕ್ಷಣ ಕಡ್ಡಾಯವಾಗಿ ಕಾನೂನು ರಚನೆಯಾಗಿದೆ. ಆರ್ಥಿಕವಾಗಿ ಬಲಾಡ್ಯರಾಗಿದ್ದವರಲ್ಲಿ ಮಾತ್ರ ಇದ್ದ ಜಮೀನು ದಿವಂಗತ ಇಂದಿರಾ ಗಾಂಧಿಯವರ ಮೂಲಕ ಒಂದು ಹಂತದವರೆಗೆ ಉಳುವವನೇ ಹೊಲದೊಡೆಯನಾಗುವ ಮೂಲಕ ಹೆಚ್ಚಿನವರಿಗೆ ಜಮೀನು ದೊರಕುವಂತಾಯಿತು. ಯಾವನೇ ಒಬ್ಬ ವ್ಯಕ್ತಿ ತನಗೆ ಅನ್ಯಾಯವಾದರೆ ಕೇವಲ ಒಂದು ಪತ್ರ ಬರೆಯುವುದರ ಮುಖೇನೆ ಹೈಕೋರ್ಟ್, ಸುಪ್ರೀಂ ಕೋರ್ಟು ಗಳು ಆ ವ್ಯಕ್ತಿಯ ಬಳಿಗೇ ಬರುವ ವ್ಯವಸ್ತೆಯಿದೆ. ಇದಕ್ಕೆಲ್ಲಾ ಕಾರಣವಾಗಿದ್ದೇ ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ನಮ್ಮ ಸಂವಿದಾನ ಎಂದರು.
ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಪ್ರಜಾಧ್ವನಿಯ ಗೌರವ ಸದಸ್ಯರು ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ನಿರ್ದೇಶಕರಾದ ಕೆ.ಪಿ ಜಾನಿ ಇವರು ಪ್ರಸ್ತಾವಿಕ ಮಾತುಗಳನ್ನಾಡಿ, “ನಮ್ಮ ಸ್ವಾತಂತ್ರ್ಯ ಹೋರಾಟಗಾರರೆಲ್ಲರ ಮನದಾಳದ ಆಶಯವನ್ನು ಇಡಿ ಜಗತ್ತು ಸುತ್ತಾಡಿ ಎಲ್ಲಾ ರಾಷ್ಟ್ರಗಳ ಸಂವಿಧಾನವನ್ನು ಅಧ್ಯಾಯನ ಮಾಡಿ ಅಕ್ಷರಗಳ ಮೂಲಕ ಜೋಡಿಸಿ ಒಂದು ಪುಸ್ತಕದ ರೂಪದಲ್ಲಿ ಜಗತ್ತಿನ ಶ್ರೇಷ್ಠ ಸಂವಿದಾನವನ್ನಾಗಿ ಡಾಕ್ಟರ್ ಬಾಬಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಅರ್ಪಿಸಿದರು ಎಂದು ಹೇಳಿದರು.
ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಇದರ ಮುಖ್ಯೋಪಾಧ್ಯಾಯರಾದ ಸೋಮಶೇಖರ್. ಪಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಜಾಧ್ವನಿ ಕರ್ನಾಟಕದ ಸಂಚಾಲಕರಾದ ಗೋಪಾಲ್ ಪೆರಾಜೆ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾಂತಿ ಬಿ.ಎಸ್ ಸ್ವಾಗತಿಸಿ ಪ್ರಾಧ್ಯಾಪಕರಾದ ಸುರೇಶ್ ವಾಗ್ಲೆ ಇವರು ವಂದಿಸಿದರು.ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕರಾದ ಪದ್ಮಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾಧ್ವನಿ ಕರ್ನಾಟಕ ಇದರ ಗೌರವ ಸದಸ್ಯರು, ಸುಳ್ಯ ನಗರಪಂಚಾಯತ್ ಸದಸ್ಯ ಉಮ್ಮರ್ ಕೆ.ಎಸ್,ರಾಜು ಪಂಡಿತ್ ,ಸಂಪಾಜೆ ಗ್ರಾಮಪಂಚಾಯತ್ ಸದಸ್ಯರಾದ ಲೆಸ್ಸಿ ಮೊನಾಲಿಸ,ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಪ್ರಮಿಳಾ ಪೆಲ್ತಡ್ಕ,ಐ.ಎನ್.ಟಿ.ಯು.ಸಿ ತಾಲೂಕು ಅಧ್ಯಕ್ಷರಾದ ಶಾಫಿ ಕುತ್ತಮೊಟ್ಟೆ, ಮಹೇಶ್ ಬೆಳ್ಳಾರ್ಕರ್, ಕೇಶವ ಪಾಟಾಳಿ, ಭರತ್ ಕುಕ್ಕುಜಡ್ಕ , ಸಾಹುಕಾರ್ ಅಶ್ರಫ್ , ದಿವಾಕರ್ ಪೈ, ಲಲನ ಕೆ.ಆರ್, ಸಿಲ್ವೆಸ್ಟರ್ ಡಿಸೋಜ, ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಶಿಕ್ಷಕರು ಸಿಬ್ಬಂದಿ ವರ್ಗ,ಮತ್ತಿತರರು ಉಪಸ್ಥಿತರಿದ್ದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…