ಶಿಲೀಂದ್ರ ನಾಶಕವಾಗಿ ಎಲೆಯ ಔಷಧಿ | ಬೆಳಕಿಗೆ ಬಂದ ಥೈಲ್ಯಾಂಡ್‌ ವರದಿ | ಅಡಿಕೆ ಎಲೆಚುಕ್ಕಿ ರೋಗಕ್ಕೂ ಪರಿಹಾರ? |

November 2, 2022
9:40 AM

ವಿವಿಧ ಎಲೆಗಳು ಕೂಡಾ ಶಿಲೀಂದ್ರನಾಶಕವಾಗಿ ಕೆಲಸ ಮಾಡುತ್ತದೆ ಎನ್ನುವ ಅಧ್ಯಯನ ವರದಿಯೊಂದು ಈಗ ಮತ್ತೆ ಬೆಳಕಿಗೆ ಬಂದಿದೆ.  ಎಲೆಗಳ ರಸವನ್ನು ತೆಗೆದು ಸಂಸ್ಕರಣೆ ಮಾಡಿ ಬಳಕೆ ಮಾಡಿದರೆ ಶಿಲೀಂದ್ರನಾಶಕವಾಗಿ ಬಳಕೆ ಮಾಡಬಹುದು ಎಂದು ಥೈಲ್ಯಾಂಡ್‌ ವರದಿಯೊಂದು ಈಗ ಚರ್ಚೆಗೆ ಬಂದಿದೆ. ವಿವಿಧ ಕೃಷಿ ಸಮಸ್ಯೆಗಳಿಗೂ ರಾಸಾಯನಿಕದ ಬದಲು ಬಳಕೆ ಮಾಡಬಹುದು ಎನ್ನುವುದು ಚರ್ಚೆ. ಇದೇ ಮಾದರಿ ಎಲೆಚುಕ್ಕಿ ರೋಗಕ್ಕೂ ಪರಿಹಾರ ಕಾಣಬಹುದು ಎಂಬುದು ಚರ್ಚೆಯ ಭಾಗವಾಗಿದೆ.

ಥೈಲ್ಯಾಂಡ್‌ನ ಸಂಶೋಧನಾ ವಿಭಾಗವೊಂದು ಈ ಬಗ್ಗೆ ಸುಮಾರು 10 ವರ್ಷಗಳ ಹಿಂದೆ ಅಧ್ಯಯನ ಮಾಡಿತ್ತು. ಸುಮಾರು 1 ಬಗೆಯ ಎಲೆಗಳನ್ನು ಸಂಗ್ರಹಿಸಿ ಅವುಗಳ ಅಧ್ಯಯನ ನಡೆಸಲಾಗಿತ್ತು. ಅನೇಕ ಸಮಯಗಳವರೆಗೆ ವಿವಿಧ ರೀತಿಯಲ್ಲಿ ಪ್ರಯೋಗ ನಡೆಸಿದ ಬಳಿಕ ಕೆಲವು ಜಾತಿಯ ಮರ ಅಥವಾ ಗಿಡಗಳ ಎಲೆಗಳೂ ಶಿಲೀಂದ್ರನಾಶಕವಾಗಿ ಬಳಕೆ ಮಾಡಬಹುದು ಎನ್ನುವುದು  ಅಧ್ಯಯನ ವರದಿ ತಿಳಿಸಿತ್ತು. ಉಷ್ಣವಲಯದ ಹಣ್ಣಿನ ಸಸ್ಯಗಳಲ್ಲಿ ಕಂಡುಬರುವ ರೋಗಕ್ಕೆ ಕಾರಣವಾಗುವ ಶಿಲೀಂದ್ರಗಳ ನಿರ್ವಹಣೆ ಮೂಲಕ ಪ್ರಯತ್ನ ಮಾಡಲಾಗಿತ್ತು. ಈ ರೋಗದ ನಿರ್ವಹಣೆಗೆ ರಾಸಾಯನಿಕ ಶಿಲೀಂಧ್ರನಾಶಕಗಳ ಬಳಕೆ ಸಾಮಾನ್ಯವಾಗಿತ್ತು. ಆದರೆ ಈ ಶಿಲೀಂದ್ರವು ಕ್ರಮೇಣ ಪ್ರತಿರೋಧದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಈ ವರದಿ ಹೇಳಿತ್ತು. ಇದಕ್ಕಾಗಿ ಸಸ್ಯಜನ್ಯವಾದ ಶಿಲೀಂದ್ರನಾಶಕಗಳು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ.

ಸಾಮಾನ್ಯವಾಗಿ ಹಿಪ್ಪಲಿ, ಕಾಡುಹಿಪ್ಪಲಿ, ಮಾವು, ಪಪ್ಪಾಯಿ ಸೇರಿದಂತೆ ಹಲವು ಬಗೆಯ ಎಲೆಗಳು ಪರಿಣಾಮಕಾರಿಯಾಗಿ ಸಂಸ್ಕರಣೆ ಹಾಗೂ ಸೂಕ್ತ ಮಾದರಿಯ ವಿಧಾನಗಳ ಬಳಿಕ ಸಿಂಪಡಿಸಿದರೆ ಶಿಲೀಂದ್ರನಾಶಕವಾಗಿ ಬಳಕೆ ಮಾಡಲು ಸಾಧ್ಯವಾಗುತ್ತದೆ. ಈಗ ಅಡಿಕೆ ಎಲೆಚುಕ್ಕಿ ರೋಗದ ನಿರ್ವಹಣೆಗೂ ಕೂಡಾ ಹಿಪ್ಪಲಿ ಎಲೆಯ ಕಷಾಯದ ಮೂಲಕ ಸಿಂಪಡಣೆ ಮಾಡಿದರೆ ನಿಯಂತ್ರಣವಾಗುತ್ತದೆ ಎನ್ನುವುದಕ್ಕೆ ಥೈಲ್ಯಾಂಡ್‌ ಅಧ್ಯಯನ ವರದಿ ತಾಳೆಯಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ
ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror