Advertisement
MIRROR FOCUS

ಶಿಲೀಂದ್ರ ನಾಶಕವಾಗಿ ಎಲೆಯ ಔಷಧಿ | ಬೆಳಕಿಗೆ ಬಂದ ಥೈಲ್ಯಾಂಡ್‌ ವರದಿ | ಅಡಿಕೆ ಎಲೆಚುಕ್ಕಿ ರೋಗಕ್ಕೂ ಪರಿಹಾರ? |

Share

ವಿವಿಧ ಎಲೆಗಳು ಕೂಡಾ ಶಿಲೀಂದ್ರನಾಶಕವಾಗಿ ಕೆಲಸ ಮಾಡುತ್ತದೆ ಎನ್ನುವ ಅಧ್ಯಯನ ವರದಿಯೊಂದು ಈಗ ಮತ್ತೆ ಬೆಳಕಿಗೆ ಬಂದಿದೆ.  ಎಲೆಗಳ ರಸವನ್ನು ತೆಗೆದು ಸಂಸ್ಕರಣೆ ಮಾಡಿ ಬಳಕೆ ಮಾಡಿದರೆ ಶಿಲೀಂದ್ರನಾಶಕವಾಗಿ ಬಳಕೆ ಮಾಡಬಹುದು ಎಂದು ಥೈಲ್ಯಾಂಡ್‌ ವರದಿಯೊಂದು ಈಗ ಚರ್ಚೆಗೆ ಬಂದಿದೆ. ವಿವಿಧ ಕೃಷಿ ಸಮಸ್ಯೆಗಳಿಗೂ ರಾಸಾಯನಿಕದ ಬದಲು ಬಳಕೆ ಮಾಡಬಹುದು ಎನ್ನುವುದು ಚರ್ಚೆ. ಇದೇ ಮಾದರಿ ಎಲೆಚುಕ್ಕಿ ರೋಗಕ್ಕೂ ಪರಿಹಾರ ಕಾಣಬಹುದು ಎಂಬುದು ಚರ್ಚೆಯ ಭಾಗವಾಗಿದೆ.

Advertisement
Advertisement
Advertisement
Advertisement

ಥೈಲ್ಯಾಂಡ್‌ನ ಸಂಶೋಧನಾ ವಿಭಾಗವೊಂದು ಈ ಬಗ್ಗೆ ಸುಮಾರು 10 ವರ್ಷಗಳ ಹಿಂದೆ ಅಧ್ಯಯನ ಮಾಡಿತ್ತು. ಸುಮಾರು 1 ಬಗೆಯ ಎಲೆಗಳನ್ನು ಸಂಗ್ರಹಿಸಿ ಅವುಗಳ ಅಧ್ಯಯನ ನಡೆಸಲಾಗಿತ್ತು. ಅನೇಕ ಸಮಯಗಳವರೆಗೆ ವಿವಿಧ ರೀತಿಯಲ್ಲಿ ಪ್ರಯೋಗ ನಡೆಸಿದ ಬಳಿಕ ಕೆಲವು ಜಾತಿಯ ಮರ ಅಥವಾ ಗಿಡಗಳ ಎಲೆಗಳೂ ಶಿಲೀಂದ್ರನಾಶಕವಾಗಿ ಬಳಕೆ ಮಾಡಬಹುದು ಎನ್ನುವುದು  ಅಧ್ಯಯನ ವರದಿ ತಿಳಿಸಿತ್ತು. ಉಷ್ಣವಲಯದ ಹಣ್ಣಿನ ಸಸ್ಯಗಳಲ್ಲಿ ಕಂಡುಬರುವ ರೋಗಕ್ಕೆ ಕಾರಣವಾಗುವ ಶಿಲೀಂದ್ರಗಳ ನಿರ್ವಹಣೆ ಮೂಲಕ ಪ್ರಯತ್ನ ಮಾಡಲಾಗಿತ್ತು. ಈ ರೋಗದ ನಿರ್ವಹಣೆಗೆ ರಾಸಾಯನಿಕ ಶಿಲೀಂಧ್ರನಾಶಕಗಳ ಬಳಕೆ ಸಾಮಾನ್ಯವಾಗಿತ್ತು. ಆದರೆ ಈ ಶಿಲೀಂದ್ರವು ಕ್ರಮೇಣ ಪ್ರತಿರೋಧದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಈ ವರದಿ ಹೇಳಿತ್ತು. ಇದಕ್ಕಾಗಿ ಸಸ್ಯಜನ್ಯವಾದ ಶಿಲೀಂದ್ರನಾಶಕಗಳು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ.

Advertisement

ಸಾಮಾನ್ಯವಾಗಿ ಹಿಪ್ಪಲಿ, ಕಾಡುಹಿಪ್ಪಲಿ, ಮಾವು, ಪಪ್ಪಾಯಿ ಸೇರಿದಂತೆ ಹಲವು ಬಗೆಯ ಎಲೆಗಳು ಪರಿಣಾಮಕಾರಿಯಾಗಿ ಸಂಸ್ಕರಣೆ ಹಾಗೂ ಸೂಕ್ತ ಮಾದರಿಯ ವಿಧಾನಗಳ ಬಳಿಕ ಸಿಂಪಡಿಸಿದರೆ ಶಿಲೀಂದ್ರನಾಶಕವಾಗಿ ಬಳಕೆ ಮಾಡಲು ಸಾಧ್ಯವಾಗುತ್ತದೆ. ಈಗ ಅಡಿಕೆ ಎಲೆಚುಕ್ಕಿ ರೋಗದ ನಿರ್ವಹಣೆಗೂ ಕೂಡಾ ಹಿಪ್ಪಲಿ ಎಲೆಯ ಕಷಾಯದ ಮೂಲಕ ಸಿಂಪಡಣೆ ಮಾಡಿದರೆ ನಿಯಂತ್ರಣವಾಗುತ್ತದೆ ಎನ್ನುವುದಕ್ಕೆ ಥೈಲ್ಯಾಂಡ್‌ ಅಧ್ಯಯನ ವರದಿ ತಾಳೆಯಾಗುತ್ತಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

5 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

5 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

5 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

13 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

14 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

14 hours ago