Advertisement
MIRROR FOCUS

ಶಿಲೀಂದ್ರ ನಾಶಕವಾಗಿ ಎಲೆಯ ಔಷಧಿ | ಬೆಳಕಿಗೆ ಬಂದ ಥೈಲ್ಯಾಂಡ್‌ ವರದಿ | ಅಡಿಕೆ ಎಲೆಚುಕ್ಕಿ ರೋಗಕ್ಕೂ ಪರಿಹಾರ? |

Share

ವಿವಿಧ ಎಲೆಗಳು ಕೂಡಾ ಶಿಲೀಂದ್ರನಾಶಕವಾಗಿ ಕೆಲಸ ಮಾಡುತ್ತದೆ ಎನ್ನುವ ಅಧ್ಯಯನ ವರದಿಯೊಂದು ಈಗ ಮತ್ತೆ ಬೆಳಕಿಗೆ ಬಂದಿದೆ.  ಎಲೆಗಳ ರಸವನ್ನು ತೆಗೆದು ಸಂಸ್ಕರಣೆ ಮಾಡಿ ಬಳಕೆ ಮಾಡಿದರೆ ಶಿಲೀಂದ್ರನಾಶಕವಾಗಿ ಬಳಕೆ ಮಾಡಬಹುದು ಎಂದು ಥೈಲ್ಯಾಂಡ್‌ ವರದಿಯೊಂದು ಈಗ ಚರ್ಚೆಗೆ ಬಂದಿದೆ. ವಿವಿಧ ಕೃಷಿ ಸಮಸ್ಯೆಗಳಿಗೂ ರಾಸಾಯನಿಕದ ಬದಲು ಬಳಕೆ ಮಾಡಬಹುದು ಎನ್ನುವುದು ಚರ್ಚೆ. ಇದೇ ಮಾದರಿ ಎಲೆಚುಕ್ಕಿ ರೋಗಕ್ಕೂ ಪರಿಹಾರ ಕಾಣಬಹುದು ಎಂಬುದು ಚರ್ಚೆಯ ಭಾಗವಾಗಿದೆ.

Advertisement
Advertisement

ಥೈಲ್ಯಾಂಡ್‌ನ ಸಂಶೋಧನಾ ವಿಭಾಗವೊಂದು ಈ ಬಗ್ಗೆ ಸುಮಾರು 10 ವರ್ಷಗಳ ಹಿಂದೆ ಅಧ್ಯಯನ ಮಾಡಿತ್ತು. ಸುಮಾರು 1 ಬಗೆಯ ಎಲೆಗಳನ್ನು ಸಂಗ್ರಹಿಸಿ ಅವುಗಳ ಅಧ್ಯಯನ ನಡೆಸಲಾಗಿತ್ತು. ಅನೇಕ ಸಮಯಗಳವರೆಗೆ ವಿವಿಧ ರೀತಿಯಲ್ಲಿ ಪ್ರಯೋಗ ನಡೆಸಿದ ಬಳಿಕ ಕೆಲವು ಜಾತಿಯ ಮರ ಅಥವಾ ಗಿಡಗಳ ಎಲೆಗಳೂ ಶಿಲೀಂದ್ರನಾಶಕವಾಗಿ ಬಳಕೆ ಮಾಡಬಹುದು ಎನ್ನುವುದು  ಅಧ್ಯಯನ ವರದಿ ತಿಳಿಸಿತ್ತು. ಉಷ್ಣವಲಯದ ಹಣ್ಣಿನ ಸಸ್ಯಗಳಲ್ಲಿ ಕಂಡುಬರುವ ರೋಗಕ್ಕೆ ಕಾರಣವಾಗುವ ಶಿಲೀಂದ್ರಗಳ ನಿರ್ವಹಣೆ ಮೂಲಕ ಪ್ರಯತ್ನ ಮಾಡಲಾಗಿತ್ತು. ಈ ರೋಗದ ನಿರ್ವಹಣೆಗೆ ರಾಸಾಯನಿಕ ಶಿಲೀಂಧ್ರನಾಶಕಗಳ ಬಳಕೆ ಸಾಮಾನ್ಯವಾಗಿತ್ತು. ಆದರೆ ಈ ಶಿಲೀಂದ್ರವು ಕ್ರಮೇಣ ಪ್ರತಿರೋಧದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಈ ವರದಿ ಹೇಳಿತ್ತು. ಇದಕ್ಕಾಗಿ ಸಸ್ಯಜನ್ಯವಾದ ಶಿಲೀಂದ್ರನಾಶಕಗಳು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ.

ಸಾಮಾನ್ಯವಾಗಿ ಹಿಪ್ಪಲಿ, ಕಾಡುಹಿಪ್ಪಲಿ, ಮಾವು, ಪಪ್ಪಾಯಿ ಸೇರಿದಂತೆ ಹಲವು ಬಗೆಯ ಎಲೆಗಳು ಪರಿಣಾಮಕಾರಿಯಾಗಿ ಸಂಸ್ಕರಣೆ ಹಾಗೂ ಸೂಕ್ತ ಮಾದರಿಯ ವಿಧಾನಗಳ ಬಳಿಕ ಸಿಂಪಡಿಸಿದರೆ ಶಿಲೀಂದ್ರನಾಶಕವಾಗಿ ಬಳಕೆ ಮಾಡಲು ಸಾಧ್ಯವಾಗುತ್ತದೆ. ಈಗ ಅಡಿಕೆ ಎಲೆಚುಕ್ಕಿ ರೋಗದ ನಿರ್ವಹಣೆಗೂ ಕೂಡಾ ಹಿಪ್ಪಲಿ ಎಲೆಯ ಕಷಾಯದ ಮೂಲಕ ಸಿಂಪಡಣೆ ಮಾಡಿದರೆ ನಿಯಂತ್ರಣವಾಗುತ್ತದೆ ಎನ್ನುವುದಕ್ಕೆ ಥೈಲ್ಯಾಂಡ್‌ ಅಧ್ಯಯನ ವರದಿ ತಾಳೆಯಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

11 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

12 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

12 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

12 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

12 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

12 hours ago