ವಿವಿಧ ಎಲೆಗಳು ಕೂಡಾ ಶಿಲೀಂದ್ರನಾಶಕವಾಗಿ ಕೆಲಸ ಮಾಡುತ್ತದೆ ಎನ್ನುವ ಅಧ್ಯಯನ ವರದಿಯೊಂದು ಈಗ ಮತ್ತೆ ಬೆಳಕಿಗೆ ಬಂದಿದೆ. ಎಲೆಗಳ ರಸವನ್ನು ತೆಗೆದು ಸಂಸ್ಕರಣೆ ಮಾಡಿ ಬಳಕೆ ಮಾಡಿದರೆ ಶಿಲೀಂದ್ರನಾಶಕವಾಗಿ ಬಳಕೆ ಮಾಡಬಹುದು ಎಂದು ಥೈಲ್ಯಾಂಡ್ ವರದಿಯೊಂದು ಈಗ ಚರ್ಚೆಗೆ ಬಂದಿದೆ. ವಿವಿಧ ಕೃಷಿ ಸಮಸ್ಯೆಗಳಿಗೂ ರಾಸಾಯನಿಕದ ಬದಲು ಬಳಕೆ ಮಾಡಬಹುದು ಎನ್ನುವುದು ಚರ್ಚೆ. ಇದೇ ಮಾದರಿ ಎಲೆಚುಕ್ಕಿ ರೋಗಕ್ಕೂ ಪರಿಹಾರ ಕಾಣಬಹುದು ಎಂಬುದು ಚರ್ಚೆಯ ಭಾಗವಾಗಿದೆ.
ಥೈಲ್ಯಾಂಡ್ನ ಸಂಶೋಧನಾ ವಿಭಾಗವೊಂದು ಈ ಬಗ್ಗೆ ಸುಮಾರು 10 ವರ್ಷಗಳ ಹಿಂದೆ ಅಧ್ಯಯನ ಮಾಡಿತ್ತು. ಸುಮಾರು 1 ಬಗೆಯ ಎಲೆಗಳನ್ನು ಸಂಗ್ರಹಿಸಿ ಅವುಗಳ ಅಧ್ಯಯನ ನಡೆಸಲಾಗಿತ್ತು. ಅನೇಕ ಸಮಯಗಳವರೆಗೆ ವಿವಿಧ ರೀತಿಯಲ್ಲಿ ಪ್ರಯೋಗ ನಡೆಸಿದ ಬಳಿಕ ಕೆಲವು ಜಾತಿಯ ಮರ ಅಥವಾ ಗಿಡಗಳ ಎಲೆಗಳೂ ಶಿಲೀಂದ್ರನಾಶಕವಾಗಿ ಬಳಕೆ ಮಾಡಬಹುದು ಎನ್ನುವುದು ಅಧ್ಯಯನ ವರದಿ ತಿಳಿಸಿತ್ತು. ಉಷ್ಣವಲಯದ ಹಣ್ಣಿನ ಸಸ್ಯಗಳಲ್ಲಿ ಕಂಡುಬರುವ ರೋಗಕ್ಕೆ ಕಾರಣವಾಗುವ ಶಿಲೀಂದ್ರಗಳ ನಿರ್ವಹಣೆ ಮೂಲಕ ಪ್ರಯತ್ನ ಮಾಡಲಾಗಿತ್ತು. ಈ ರೋಗದ ನಿರ್ವಹಣೆಗೆ ರಾಸಾಯನಿಕ ಶಿಲೀಂಧ್ರನಾಶಕಗಳ ಬಳಕೆ ಸಾಮಾನ್ಯವಾಗಿತ್ತು. ಆದರೆ ಈ ಶಿಲೀಂದ್ರವು ಕ್ರಮೇಣ ಪ್ರತಿರೋಧದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಈ ವರದಿ ಹೇಳಿತ್ತು. ಇದಕ್ಕಾಗಿ ಸಸ್ಯಜನ್ಯವಾದ ಶಿಲೀಂದ್ರನಾಶಕಗಳು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ.
ಸಾಮಾನ್ಯವಾಗಿ ಹಿಪ್ಪಲಿ, ಕಾಡುಹಿಪ್ಪಲಿ, ಮಾವು, ಪಪ್ಪಾಯಿ ಸೇರಿದಂತೆ ಹಲವು ಬಗೆಯ ಎಲೆಗಳು ಪರಿಣಾಮಕಾರಿಯಾಗಿ ಸಂಸ್ಕರಣೆ ಹಾಗೂ ಸೂಕ್ತ ಮಾದರಿಯ ವಿಧಾನಗಳ ಬಳಿಕ ಸಿಂಪಡಿಸಿದರೆ ಶಿಲೀಂದ್ರನಾಶಕವಾಗಿ ಬಳಕೆ ಮಾಡಲು ಸಾಧ್ಯವಾಗುತ್ತದೆ. ಈಗ ಅಡಿಕೆ ಎಲೆಚುಕ್ಕಿ ರೋಗದ ನಿರ್ವಹಣೆಗೂ ಕೂಡಾ ಹಿಪ್ಪಲಿ ಎಲೆಯ ಕಷಾಯದ ಮೂಲಕ ಸಿಂಪಡಣೆ ಮಾಡಿದರೆ ನಿಯಂತ್ರಣವಾಗುತ್ತದೆ ಎನ್ನುವುದಕ್ಕೆ ಥೈಲ್ಯಾಂಡ್ ಅಧ್ಯಯನ ವರದಿ ತಾಳೆಯಾಗುತ್ತಿದೆ.
"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490