Advertisement
MIRROR FOCUS

ಶಿಲೀಂದ್ರ ನಾಶಕವಾಗಿ ಎಲೆಯ ಔಷಧಿ | ಬೆಳಕಿಗೆ ಬಂದ ಥೈಲ್ಯಾಂಡ್‌ ವರದಿ | ಅಡಿಕೆ ಎಲೆಚುಕ್ಕಿ ರೋಗಕ್ಕೂ ಪರಿಹಾರ? |

Share

ವಿವಿಧ ಎಲೆಗಳು ಕೂಡಾ ಶಿಲೀಂದ್ರನಾಶಕವಾಗಿ ಕೆಲಸ ಮಾಡುತ್ತದೆ ಎನ್ನುವ ಅಧ್ಯಯನ ವರದಿಯೊಂದು ಈಗ ಮತ್ತೆ ಬೆಳಕಿಗೆ ಬಂದಿದೆ.  ಎಲೆಗಳ ರಸವನ್ನು ತೆಗೆದು ಸಂಸ್ಕರಣೆ ಮಾಡಿ ಬಳಕೆ ಮಾಡಿದರೆ ಶಿಲೀಂದ್ರನಾಶಕವಾಗಿ ಬಳಕೆ ಮಾಡಬಹುದು ಎಂದು ಥೈಲ್ಯಾಂಡ್‌ ವರದಿಯೊಂದು ಈಗ ಚರ್ಚೆಗೆ ಬಂದಿದೆ. ವಿವಿಧ ಕೃಷಿ ಸಮಸ್ಯೆಗಳಿಗೂ ರಾಸಾಯನಿಕದ ಬದಲು ಬಳಕೆ ಮಾಡಬಹುದು ಎನ್ನುವುದು ಚರ್ಚೆ. ಇದೇ ಮಾದರಿ ಎಲೆಚುಕ್ಕಿ ರೋಗಕ್ಕೂ ಪರಿಹಾರ ಕಾಣಬಹುದು ಎಂಬುದು ಚರ್ಚೆಯ ಭಾಗವಾಗಿದೆ.

Advertisement

ಥೈಲ್ಯಾಂಡ್‌ನ ಸಂಶೋಧನಾ ವಿಭಾಗವೊಂದು ಈ ಬಗ್ಗೆ ಸುಮಾರು 10 ವರ್ಷಗಳ ಹಿಂದೆ ಅಧ್ಯಯನ ಮಾಡಿತ್ತು. ಸುಮಾರು 1 ಬಗೆಯ ಎಲೆಗಳನ್ನು ಸಂಗ್ರಹಿಸಿ ಅವುಗಳ ಅಧ್ಯಯನ ನಡೆಸಲಾಗಿತ್ತು. ಅನೇಕ ಸಮಯಗಳವರೆಗೆ ವಿವಿಧ ರೀತಿಯಲ್ಲಿ ಪ್ರಯೋಗ ನಡೆಸಿದ ಬಳಿಕ ಕೆಲವು ಜಾತಿಯ ಮರ ಅಥವಾ ಗಿಡಗಳ ಎಲೆಗಳೂ ಶಿಲೀಂದ್ರನಾಶಕವಾಗಿ ಬಳಕೆ ಮಾಡಬಹುದು ಎನ್ನುವುದು  ಅಧ್ಯಯನ ವರದಿ ತಿಳಿಸಿತ್ತು. ಉಷ್ಣವಲಯದ ಹಣ್ಣಿನ ಸಸ್ಯಗಳಲ್ಲಿ ಕಂಡುಬರುವ ರೋಗಕ್ಕೆ ಕಾರಣವಾಗುವ ಶಿಲೀಂದ್ರಗಳ ನಿರ್ವಹಣೆ ಮೂಲಕ ಪ್ರಯತ್ನ ಮಾಡಲಾಗಿತ್ತು. ಈ ರೋಗದ ನಿರ್ವಹಣೆಗೆ ರಾಸಾಯನಿಕ ಶಿಲೀಂಧ್ರನಾಶಕಗಳ ಬಳಕೆ ಸಾಮಾನ್ಯವಾಗಿತ್ತು. ಆದರೆ ಈ ಶಿಲೀಂದ್ರವು ಕ್ರಮೇಣ ಪ್ರತಿರೋಧದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಈ ವರದಿ ಹೇಳಿತ್ತು. ಇದಕ್ಕಾಗಿ ಸಸ್ಯಜನ್ಯವಾದ ಶಿಲೀಂದ್ರನಾಶಕಗಳು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ.

ಸಾಮಾನ್ಯವಾಗಿ ಹಿಪ್ಪಲಿ, ಕಾಡುಹಿಪ್ಪಲಿ, ಮಾವು, ಪಪ್ಪಾಯಿ ಸೇರಿದಂತೆ ಹಲವು ಬಗೆಯ ಎಲೆಗಳು ಪರಿಣಾಮಕಾರಿಯಾಗಿ ಸಂಸ್ಕರಣೆ ಹಾಗೂ ಸೂಕ್ತ ಮಾದರಿಯ ವಿಧಾನಗಳ ಬಳಿಕ ಸಿಂಪಡಿಸಿದರೆ ಶಿಲೀಂದ್ರನಾಶಕವಾಗಿ ಬಳಕೆ ಮಾಡಲು ಸಾಧ್ಯವಾಗುತ್ತದೆ. ಈಗ ಅಡಿಕೆ ಎಲೆಚುಕ್ಕಿ ರೋಗದ ನಿರ್ವಹಣೆಗೂ ಕೂಡಾ ಹಿಪ್ಪಲಿ ಎಲೆಯ ಕಷಾಯದ ಮೂಲಕ ಸಿಂಪಡಣೆ ಮಾಡಿದರೆ ನಿಯಂತ್ರಣವಾಗುತ್ತದೆ ಎನ್ನುವುದಕ್ಕೆ ಥೈಲ್ಯಾಂಡ್‌ ಅಧ್ಯಯನ ವರದಿ ತಾಳೆಯಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

10 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

23 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

23 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

1 day ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

1 day ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

2 days ago