Advertisement
MIRROR FOCUS

ಶಿಲೀಂದ್ರ ನಾಶಕವಾಗಿ ಎಲೆಯ ಔಷಧಿ | ಬೆಳಕಿಗೆ ಬಂದ ಥೈಲ್ಯಾಂಡ್‌ ವರದಿ | ಅಡಿಕೆ ಎಲೆಚುಕ್ಕಿ ರೋಗಕ್ಕೂ ಪರಿಹಾರ? |

Share

ವಿವಿಧ ಎಲೆಗಳು ಕೂಡಾ ಶಿಲೀಂದ್ರನಾಶಕವಾಗಿ ಕೆಲಸ ಮಾಡುತ್ತದೆ ಎನ್ನುವ ಅಧ್ಯಯನ ವರದಿಯೊಂದು ಈಗ ಮತ್ತೆ ಬೆಳಕಿಗೆ ಬಂದಿದೆ.  ಎಲೆಗಳ ರಸವನ್ನು ತೆಗೆದು ಸಂಸ್ಕರಣೆ ಮಾಡಿ ಬಳಕೆ ಮಾಡಿದರೆ ಶಿಲೀಂದ್ರನಾಶಕವಾಗಿ ಬಳಕೆ ಮಾಡಬಹುದು ಎಂದು ಥೈಲ್ಯಾಂಡ್‌ ವರದಿಯೊಂದು ಈಗ ಚರ್ಚೆಗೆ ಬಂದಿದೆ. ವಿವಿಧ ಕೃಷಿ ಸಮಸ್ಯೆಗಳಿಗೂ ರಾಸಾಯನಿಕದ ಬದಲು ಬಳಕೆ ಮಾಡಬಹುದು ಎನ್ನುವುದು ಚರ್ಚೆ. ಇದೇ ಮಾದರಿ ಎಲೆಚುಕ್ಕಿ ರೋಗಕ್ಕೂ ಪರಿಹಾರ ಕಾಣಬಹುದು ಎಂಬುದು ಚರ್ಚೆಯ ಭಾಗವಾಗಿದೆ.

ಥೈಲ್ಯಾಂಡ್‌ನ ಸಂಶೋಧನಾ ವಿಭಾಗವೊಂದು ಈ ಬಗ್ಗೆ ಸುಮಾರು 10 ವರ್ಷಗಳ ಹಿಂದೆ ಅಧ್ಯಯನ ಮಾಡಿತ್ತು. ಸುಮಾರು 1 ಬಗೆಯ ಎಲೆಗಳನ್ನು ಸಂಗ್ರಹಿಸಿ ಅವುಗಳ ಅಧ್ಯಯನ ನಡೆಸಲಾಗಿತ್ತು. ಅನೇಕ ಸಮಯಗಳವರೆಗೆ ವಿವಿಧ ರೀತಿಯಲ್ಲಿ ಪ್ರಯೋಗ ನಡೆಸಿದ ಬಳಿಕ ಕೆಲವು ಜಾತಿಯ ಮರ ಅಥವಾ ಗಿಡಗಳ ಎಲೆಗಳೂ ಶಿಲೀಂದ್ರನಾಶಕವಾಗಿ ಬಳಕೆ ಮಾಡಬಹುದು ಎನ್ನುವುದು  ಅಧ್ಯಯನ ವರದಿ ತಿಳಿಸಿತ್ತು. ಉಷ್ಣವಲಯದ ಹಣ್ಣಿನ ಸಸ್ಯಗಳಲ್ಲಿ ಕಂಡುಬರುವ ರೋಗಕ್ಕೆ ಕಾರಣವಾಗುವ ಶಿಲೀಂದ್ರಗಳ ನಿರ್ವಹಣೆ ಮೂಲಕ ಪ್ರಯತ್ನ ಮಾಡಲಾಗಿತ್ತು. ಈ ರೋಗದ ನಿರ್ವಹಣೆಗೆ ರಾಸಾಯನಿಕ ಶಿಲೀಂಧ್ರನಾಶಕಗಳ ಬಳಕೆ ಸಾಮಾನ್ಯವಾಗಿತ್ತು. ಆದರೆ ಈ ಶಿಲೀಂದ್ರವು ಕ್ರಮೇಣ ಪ್ರತಿರೋಧದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಈ ವರದಿ ಹೇಳಿತ್ತು. ಇದಕ್ಕಾಗಿ ಸಸ್ಯಜನ್ಯವಾದ ಶಿಲೀಂದ್ರನಾಶಕಗಳು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ.

ಸಾಮಾನ್ಯವಾಗಿ ಹಿಪ್ಪಲಿ, ಕಾಡುಹಿಪ್ಪಲಿ, ಮಾವು, ಪಪ್ಪಾಯಿ ಸೇರಿದಂತೆ ಹಲವು ಬಗೆಯ ಎಲೆಗಳು ಪರಿಣಾಮಕಾರಿಯಾಗಿ ಸಂಸ್ಕರಣೆ ಹಾಗೂ ಸೂಕ್ತ ಮಾದರಿಯ ವಿಧಾನಗಳ ಬಳಿಕ ಸಿಂಪಡಿಸಿದರೆ ಶಿಲೀಂದ್ರನಾಶಕವಾಗಿ ಬಳಕೆ ಮಾಡಲು ಸಾಧ್ಯವಾಗುತ್ತದೆ. ಈಗ ಅಡಿಕೆ ಎಲೆಚುಕ್ಕಿ ರೋಗದ ನಿರ್ವಹಣೆಗೂ ಕೂಡಾ ಹಿಪ್ಪಲಿ ಎಲೆಯ ಕಷಾಯದ ಮೂಲಕ ಸಿಂಪಡಣೆ ಮಾಡಿದರೆ ನಿಯಂತ್ರಣವಾಗುತ್ತದೆ ಎನ್ನುವುದಕ್ಕೆ ಥೈಲ್ಯಾಂಡ್‌ ಅಧ್ಯಯನ ವರದಿ ತಾಳೆಯಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

6 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

8 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

15 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

22 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago