Advertisement
MIRROR FOCUS

ಶಿಲೀಂದ್ರ ನಾಶಕವಾಗಿ ಎಲೆಯ ಔಷಧಿ | ಬೆಳಕಿಗೆ ಬಂದ ಥೈಲ್ಯಾಂಡ್‌ ವರದಿ | ಅಡಿಕೆ ಎಲೆಚುಕ್ಕಿ ರೋಗಕ್ಕೂ ಪರಿಹಾರ? |

Share

ವಿವಿಧ ಎಲೆಗಳು ಕೂಡಾ ಶಿಲೀಂದ್ರನಾಶಕವಾಗಿ ಕೆಲಸ ಮಾಡುತ್ತದೆ ಎನ್ನುವ ಅಧ್ಯಯನ ವರದಿಯೊಂದು ಈಗ ಮತ್ತೆ ಬೆಳಕಿಗೆ ಬಂದಿದೆ.  ಎಲೆಗಳ ರಸವನ್ನು ತೆಗೆದು ಸಂಸ್ಕರಣೆ ಮಾಡಿ ಬಳಕೆ ಮಾಡಿದರೆ ಶಿಲೀಂದ್ರನಾಶಕವಾಗಿ ಬಳಕೆ ಮಾಡಬಹುದು ಎಂದು ಥೈಲ್ಯಾಂಡ್‌ ವರದಿಯೊಂದು ಈಗ ಚರ್ಚೆಗೆ ಬಂದಿದೆ. ವಿವಿಧ ಕೃಷಿ ಸಮಸ್ಯೆಗಳಿಗೂ ರಾಸಾಯನಿಕದ ಬದಲು ಬಳಕೆ ಮಾಡಬಹುದು ಎನ್ನುವುದು ಚರ್ಚೆ. ಇದೇ ಮಾದರಿ ಎಲೆಚುಕ್ಕಿ ರೋಗಕ್ಕೂ ಪರಿಹಾರ ಕಾಣಬಹುದು ಎಂಬುದು ಚರ್ಚೆಯ ಭಾಗವಾಗಿದೆ.

ಥೈಲ್ಯಾಂಡ್‌ನ ಸಂಶೋಧನಾ ವಿಭಾಗವೊಂದು ಈ ಬಗ್ಗೆ ಸುಮಾರು 10 ವರ್ಷಗಳ ಹಿಂದೆ ಅಧ್ಯಯನ ಮಾಡಿತ್ತು. ಸುಮಾರು 1 ಬಗೆಯ ಎಲೆಗಳನ್ನು ಸಂಗ್ರಹಿಸಿ ಅವುಗಳ ಅಧ್ಯಯನ ನಡೆಸಲಾಗಿತ್ತು. ಅನೇಕ ಸಮಯಗಳವರೆಗೆ ವಿವಿಧ ರೀತಿಯಲ್ಲಿ ಪ್ರಯೋಗ ನಡೆಸಿದ ಬಳಿಕ ಕೆಲವು ಜಾತಿಯ ಮರ ಅಥವಾ ಗಿಡಗಳ ಎಲೆಗಳೂ ಶಿಲೀಂದ್ರನಾಶಕವಾಗಿ ಬಳಕೆ ಮಾಡಬಹುದು ಎನ್ನುವುದು  ಅಧ್ಯಯನ ವರದಿ ತಿಳಿಸಿತ್ತು. ಉಷ್ಣವಲಯದ ಹಣ್ಣಿನ ಸಸ್ಯಗಳಲ್ಲಿ ಕಂಡುಬರುವ ರೋಗಕ್ಕೆ ಕಾರಣವಾಗುವ ಶಿಲೀಂದ್ರಗಳ ನಿರ್ವಹಣೆ ಮೂಲಕ ಪ್ರಯತ್ನ ಮಾಡಲಾಗಿತ್ತು. ಈ ರೋಗದ ನಿರ್ವಹಣೆಗೆ ರಾಸಾಯನಿಕ ಶಿಲೀಂಧ್ರನಾಶಕಗಳ ಬಳಕೆ ಸಾಮಾನ್ಯವಾಗಿತ್ತು. ಆದರೆ ಈ ಶಿಲೀಂದ್ರವು ಕ್ರಮೇಣ ಪ್ರತಿರೋಧದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಈ ವರದಿ ಹೇಳಿತ್ತು. ಇದಕ್ಕಾಗಿ ಸಸ್ಯಜನ್ಯವಾದ ಶಿಲೀಂದ್ರನಾಶಕಗಳು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ.

ಸಾಮಾನ್ಯವಾಗಿ ಹಿಪ್ಪಲಿ, ಕಾಡುಹಿಪ್ಪಲಿ, ಮಾವು, ಪಪ್ಪಾಯಿ ಸೇರಿದಂತೆ ಹಲವು ಬಗೆಯ ಎಲೆಗಳು ಪರಿಣಾಮಕಾರಿಯಾಗಿ ಸಂಸ್ಕರಣೆ ಹಾಗೂ ಸೂಕ್ತ ಮಾದರಿಯ ವಿಧಾನಗಳ ಬಳಿಕ ಸಿಂಪಡಿಸಿದರೆ ಶಿಲೀಂದ್ರನಾಶಕವಾಗಿ ಬಳಕೆ ಮಾಡಲು ಸಾಧ್ಯವಾಗುತ್ತದೆ. ಈಗ ಅಡಿಕೆ ಎಲೆಚುಕ್ಕಿ ರೋಗದ ನಿರ್ವಹಣೆಗೂ ಕೂಡಾ ಹಿಪ್ಪಲಿ ಎಲೆಯ ಕಷಾಯದ ಮೂಲಕ ಸಿಂಪಡಣೆ ಮಾಡಿದರೆ ನಿಯಂತ್ರಣವಾಗುತ್ತದೆ ಎನ್ನುವುದಕ್ಕೆ ಥೈಲ್ಯಾಂಡ್‌ ಅಧ್ಯಯನ ವರದಿ ತಾಳೆಯಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

6 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

7 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

8 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

9 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

22 hours ago