Advertisement
MIRROR FOCUS

ಶಿಲೀಂದ್ರ ನಾಶಕವಾಗಿ ಎಲೆಯ ಔಷಧಿ | ಬೆಳಕಿಗೆ ಬಂದ ಥೈಲ್ಯಾಂಡ್‌ ವರದಿ | ಅಡಿಕೆ ಎಲೆಚುಕ್ಕಿ ರೋಗಕ್ಕೂ ಪರಿಹಾರ? |

Share

ವಿವಿಧ ಎಲೆಗಳು ಕೂಡಾ ಶಿಲೀಂದ್ರನಾಶಕವಾಗಿ ಕೆಲಸ ಮಾಡುತ್ತದೆ ಎನ್ನುವ ಅಧ್ಯಯನ ವರದಿಯೊಂದು ಈಗ ಮತ್ತೆ ಬೆಳಕಿಗೆ ಬಂದಿದೆ.  ಎಲೆಗಳ ರಸವನ್ನು ತೆಗೆದು ಸಂಸ್ಕರಣೆ ಮಾಡಿ ಬಳಕೆ ಮಾಡಿದರೆ ಶಿಲೀಂದ್ರನಾಶಕವಾಗಿ ಬಳಕೆ ಮಾಡಬಹುದು ಎಂದು ಥೈಲ್ಯಾಂಡ್‌ ವರದಿಯೊಂದು ಈಗ ಚರ್ಚೆಗೆ ಬಂದಿದೆ. ವಿವಿಧ ಕೃಷಿ ಸಮಸ್ಯೆಗಳಿಗೂ ರಾಸಾಯನಿಕದ ಬದಲು ಬಳಕೆ ಮಾಡಬಹುದು ಎನ್ನುವುದು ಚರ್ಚೆ. ಇದೇ ಮಾದರಿ ಎಲೆಚುಕ್ಕಿ ರೋಗಕ್ಕೂ ಪರಿಹಾರ ಕಾಣಬಹುದು ಎಂಬುದು ಚರ್ಚೆಯ ಭಾಗವಾಗಿದೆ.

ಥೈಲ್ಯಾಂಡ್‌ನ ಸಂಶೋಧನಾ ವಿಭಾಗವೊಂದು ಈ ಬಗ್ಗೆ ಸುಮಾರು 10 ವರ್ಷಗಳ ಹಿಂದೆ ಅಧ್ಯಯನ ಮಾಡಿತ್ತು. ಸುಮಾರು 1 ಬಗೆಯ ಎಲೆಗಳನ್ನು ಸಂಗ್ರಹಿಸಿ ಅವುಗಳ ಅಧ್ಯಯನ ನಡೆಸಲಾಗಿತ್ತು. ಅನೇಕ ಸಮಯಗಳವರೆಗೆ ವಿವಿಧ ರೀತಿಯಲ್ಲಿ ಪ್ರಯೋಗ ನಡೆಸಿದ ಬಳಿಕ ಕೆಲವು ಜಾತಿಯ ಮರ ಅಥವಾ ಗಿಡಗಳ ಎಲೆಗಳೂ ಶಿಲೀಂದ್ರನಾಶಕವಾಗಿ ಬಳಕೆ ಮಾಡಬಹುದು ಎನ್ನುವುದು  ಅಧ್ಯಯನ ವರದಿ ತಿಳಿಸಿತ್ತು. ಉಷ್ಣವಲಯದ ಹಣ್ಣಿನ ಸಸ್ಯಗಳಲ್ಲಿ ಕಂಡುಬರುವ ರೋಗಕ್ಕೆ ಕಾರಣವಾಗುವ ಶಿಲೀಂದ್ರಗಳ ನಿರ್ವಹಣೆ ಮೂಲಕ ಪ್ರಯತ್ನ ಮಾಡಲಾಗಿತ್ತು. ಈ ರೋಗದ ನಿರ್ವಹಣೆಗೆ ರಾಸಾಯನಿಕ ಶಿಲೀಂಧ್ರನಾಶಕಗಳ ಬಳಕೆ ಸಾಮಾನ್ಯವಾಗಿತ್ತು. ಆದರೆ ಈ ಶಿಲೀಂದ್ರವು ಕ್ರಮೇಣ ಪ್ರತಿರೋಧದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಈ ವರದಿ ಹೇಳಿತ್ತು. ಇದಕ್ಕಾಗಿ ಸಸ್ಯಜನ್ಯವಾದ ಶಿಲೀಂದ್ರನಾಶಕಗಳು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ.

ಸಾಮಾನ್ಯವಾಗಿ ಹಿಪ್ಪಲಿ, ಕಾಡುಹಿಪ್ಪಲಿ, ಮಾವು, ಪಪ್ಪಾಯಿ ಸೇರಿದಂತೆ ಹಲವು ಬಗೆಯ ಎಲೆಗಳು ಪರಿಣಾಮಕಾರಿಯಾಗಿ ಸಂಸ್ಕರಣೆ ಹಾಗೂ ಸೂಕ್ತ ಮಾದರಿಯ ವಿಧಾನಗಳ ಬಳಿಕ ಸಿಂಪಡಿಸಿದರೆ ಶಿಲೀಂದ್ರನಾಶಕವಾಗಿ ಬಳಕೆ ಮಾಡಲು ಸಾಧ್ಯವಾಗುತ್ತದೆ. ಈಗ ಅಡಿಕೆ ಎಲೆಚುಕ್ಕಿ ರೋಗದ ನಿರ್ವಹಣೆಗೂ ಕೂಡಾ ಹಿಪ್ಪಲಿ ಎಲೆಯ ಕಷಾಯದ ಮೂಲಕ ಸಿಂಪಡಣೆ ಮಾಡಿದರೆ ನಿಯಂತ್ರಣವಾಗುತ್ತದೆ ಎನ್ನುವುದಕ್ಕೆ ಥೈಲ್ಯಾಂಡ್‌ ಅಧ್ಯಯನ ವರದಿ ತಾಳೆಯಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago