Advertisement
ಸುದ್ದಿಗಳು

ಬೆಳೆಗಳ ಮಾರಾಟ ವ್ಯವಸ್ಥೆಯಲ್ಲಾಗುವ ಸೋರಿಕೆ ಕಡಿಮೆಗೊಳಿಸಬೇಕಿದೆ

Share

ಬೆಳೆಗಳ ಮಾರಾಟ ವ್ಯವಸ್ಥೆಯಲ್ಲಾಗುವ ಸೋರಿಕೆ ಕಡಿಮೆಗೊಳಿಸಿ ರೈತರಿಗೆ ಅಧಿಕ ಲಾಭ ದೊರೆಯುವಂತಾಗಲು ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಾಗಿದೆ, ಈ ನಿಟ್ಟಿನಲ್ಲಿ ವೈಜ್ಞಾನಿಕ ವ್ಯವಸ್ಥೆ ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು.

ದೆಹಲಿಯಲ್ಲಿರುವ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಹಿಂಗಾರು ಅಭಿಯಾನದ ಕುರಿತು  ನಡೆದ  ರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ದೇಶದ ಕೃಷಿಕರ ಅಭ್ಯುದಯಕ್ಕೆ ನಿರಂತರವಾಗಿ ಶ್ರಮಿಸುತ್ತಿದ್ದು, ಸತತವಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಕನಿಷ್ಠ ಬೆಂಬಲ ಬೆಲೆಯ ಮೂಲಕ ರೈತರು ಬೆಳೆದ ಬೆಳೆಗಳನ್ನು ಖರೀದಿಸಲಾಗುತ್ತಿದೆ. ಕೃಷಿ ರಫ್ತು ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಅನೇಕ ಬೆಳೆಗಳ ರಫ್ತಿನ ಮೇಲಿನ ಶುಲ್ಕವನ್ನು ರದ್ದುಪಡಿಸಲಾಗಿದೆ ಎಂದು ಹೇಳಿದರು. ಬಹುಬೇಗ ಹಾಳಾಗುವ ಕೃಷಿ ಬೆಳೆಗಳ ಸೂಕ್ತ ಸಂಗ್ರಹ, ಸಾಗಾಟಕ್ಕೆ ಅನುಕೂಲವಾಗುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು. ಕೃಷಿ ಬೆಳೆಗಳ ವೈವಿಧ್ಯತೆ, ಮೌಲ್ಯವರ್ಧನೆಗೆ ಉತ್ತೇಜನ ನೀಡಲಾಗುತ್ತಿದ್ದು, ದೇಶದ ಕೃಷಿಕರ ಆದಾಯ ಹೆಚ್ಚಳಕ್ಕೆ ಸರ್ವ ಪ್ರಯತ್ನ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಎಲ್ಲಾ ರಾಜ್ಯಗಳ ಕೃಷಿ ಸಚಿವರು, ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

1 hour ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

2 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

23 hours ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

23 hours ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

23 hours ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

1 day ago