Advertisement
ಸುದ್ದಿಗಳು

ಚಪ್ಪಲಿ ಬಿಡಿ, ಬರಿಗಾಲಲ್ಲಿ ನಡೆಯಿರಿ | ಬರಿಗಾಲ ನಡಿಗೆಯಿಂದ ವೃದ್ಧಿಯಾಗುತ್ತೆ ಆರೋಗ್ಯ…! |

Share

ವಾರಕ್ಕೆ ಒಮ್ಮೆಯಾದರೂ ಒಂದು ಕಿ.ಮೀ ದೂರ ಚಪ್ಪಲಿ ಇಲ್ಲದೆ ನಡೆದರೆ ಆರೋಗ್ಯ ಹೆಚ್ಚುತ್ತದೆ. ದೇಹದಲ್ಲಿ ರಕ್ತ ಸಂಚಾರ ಸರಾಗವಾಗುತ್ತದೆ ಹಾಗೂ ಆಕ್ಯುಪ್ರೆಶರ್‌ ಸಾಧ್ಯವಾಗುತ್ತದೆ ಎನ್ನುವುದು  ವರದಿ. ಇದಕ್ಕಾಗಿ ವಾರಕ್ಕೆ ಒಮ್ಮೆಯಾದರೂ ಒಂದು ಕಿ.ಮೀ ದೂರ ಚಪ್ಪಲಿ ಇಲ್ಲದೆ ನಡೆಯುವ ಪ್ರಯತ್ನ ಮಾಡಿದರೆ ಉತ್ತಮ ಎನ್ನುವುದು  ಇಲ್ಲಿ ನೀಡಿರುವ ಸಂದೇಶ.

ಮನುಷ್ಯನ ಪಾದಗಳಲ್ಲಿ ಅನೇಕ ನರಗಳ ತುದಿ ಇರುತ್ತದೆ. ಹೆಚ್ಚು ಹೊತ್ತು ಪಾದರಕ್ಷೆಗಳನ್ನು ಬಳಸುವುದರಿಂದ ಸೂಕ್ಷ್ಮವಾದ ಈ ನರಗಳು ಸಂವೇದನೆಯನ್ನು ಕಳೆದುಕೊಳ್ಳುತ್ತವೆ. ಚಪ್ಪಲಿ ಇಲ್ಲದಂತೆ ನಡೆಯುವುದರಿಂದ ಈ ನರಗಳು ಆಕ್ಟೀವ್ ಆಗಿ ಇರುತ್ತದೆ.

ಚಪ್ಪಲಿ ಇಲ್ಲದೆ ನಡೆಯುವುದರಿಂದ  ದೇಹದ ಭಂಗಿ ಸೂಕ್ತ ರೀತಿಯಲ್ಲಿರುತ್ತದೆ. ಹೊಟ್ಟೆಯ ಮೇಲೆ ಒತ್ತಡ ಉಂಟಾಗಿ, ಜೀರ್ಣಕ್ರಿಯೆ ಸೂಕ್ತ ರೀತಿಯಲ್ಲಿ ನಡೆಯುತ್ತದೆ. ಚಪ್ಪಲಿ ಇಲ್ಲದಂತೆ ನಡೆಯುವುದರಿಂದ, ಮರಳು, ಚಿಕ್ಕ ಚಿಕ್ಕ ಕಲ್ಲುಗಳು ಮೃದುವಾಗಿ ಚುಚ್ಚಿಕೊಳ್ಳುವುದರಿಂದ, ನಿಮ್ಮ ರಕ್ತದ ಒತ್ತಡ ನಿಯಂತ್ರಣದಲ್ಲಿರುತ್ತದೆ. ಹೊಸ ಸ್ಪರ್ಶವನ್ನು ಪಾದಗಳು ಪಡೆಯುವುದರಿಂದ ಮೈಂಡ್ ರಿಲ್ಯಾಕ್ಸ್ ಆಗುತ್ತದೆ.ರಕ್ತ ಸಂಚಲನೆ ವ್ಯವಸ್ಥೆ ಕ್ರಿಯೆ ಉತ್ತಮಗೊಳ್ಳುತ್ತದೆ.  ಸಹನೆ ಹೆಚ್ಚುತ್ತದೆ.

ಇದಕ್ಕಾಗಿ ಎಲ್ಲೆಡೆ ಅಲ್ಲದಿದ್ದರೂ, ಕಚೇರಿಯಲ್ಲಿ, ಮನೆಯಲ್ಲಿ ಚಪ್ಪಲಿ ಇಲ್ಲದಂತೆ ನಡೆಯುವ ಅಭ್ಯಾಸ ಮಾಡಿದರೆ ಉತ್ತಮ ಎನ್ನುವುದು  ವರದಿ. ಸಮೀಕ್ಷೆ ಪ್ರಕಾರ ಯಾರು ಪ್ರತಿ ವಾರ ಕನಿಷ್ಠ 2 ಗಂಟೆ ಚಪ್ಪಲಿ ಇಲ್ಲದೆ ನಡೆಯುತ್ತಾರೋ, ಅಂತಹವರಲ್ಲಿ ಹೆಚ್ಚಿನವರಿಗಿಂತ ಆರೋಗ್ಯವಾಗಿ ಮತ್ತು ಕಾಯಿಲೆ ಬರದಂತೆ ಇರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

24 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

24 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

24 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

24 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 day ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago