ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್ಲೈನ್ ಮೂಲಕ ಮೆಸೇಜ್ ಕಳುಹಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.
ಮೊಬೈಲಿನಲ್ಲಿ ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್ಲೈನ್ ಮೂಲಕ ಸಂದೇಶ ರವಾನಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಸ್ಕಾಂ ಅಧಿಕಾರಿಗಳ ಹೆಸರಲ್ಲಿ ಮೋಸ ನಡೆಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಬೆಸ್ಕಾಂ ತನ್ನ ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ವಂಚಕರು ವಿದ್ಯುತ್ ನಿಗಮದ ಹೆಸರಿನಲ್ಲಿ ಸಂದೇಶವನ್ನು ಕಳುಹಿಸುವ ಮೂಲಕ ಅವರಿಗೆ ಕರೆ ಮಾಡುವಂತೆ ಸೂಚಿಸುತ್ತಿದ್ದಾರೆ, ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳಿಸುವಂತೆ ಎಚ್ಚರಿಸಿದ್ದಾರೆ.
ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಪಂಜಾಬ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಬಿಲ್ ಪಾವತಿಸುವಂತೆ ಮೆಸೇಜ್ ಹರಿದಾಡುತ್ತಿದೆ. “ಪ್ರಿಯ ಗ್ರಾಹಕರೇ, ನಿಮ್ಮ ಹಿಂದಿನ ತಿಂಗಳ ಬಿಲ್ ಅಪ್ಡೇಟ್ ಆಗದ ಕಾರಣ ಇಂದು ರಾತ್ರಿ 9.30 ಕ್ಕೆ ವಿದ್ಯುತ್ ಕಚೇರಿಯಿಂದ ನಿಮ್ಮ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ದಯವಿಟ್ಟು ತಕ್ಷಣವೇ ನಮ್ಮ ವಿದ್ಯುತ್ ಅಧಿಕಾರಿಯನ್ನು ಸಂಪರ್ಕಿಸಿ ಧನ್ಯವಾದಗಳು”, ಎಂದು ಒಂದು ಮೊಬೈಲ್ ಸಂಖ್ಯೆಯೊಂದಿಗೆ ಸಂದೇಶದಲ್ಲಿ ಬರೆಯಲಾಗಿರುತ್ತದೆ.
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…