ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್ಲೈನ್ ಮೂಲಕ ಮೆಸೇಜ್ ಕಳುಹಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.
ಮೊಬೈಲಿನಲ್ಲಿ ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್ಲೈನ್ ಮೂಲಕ ಸಂದೇಶ ರವಾನಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಸ್ಕಾಂ ಅಧಿಕಾರಿಗಳ ಹೆಸರಲ್ಲಿ ಮೋಸ ನಡೆಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಬೆಸ್ಕಾಂ ತನ್ನ ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ವಂಚಕರು ವಿದ್ಯುತ್ ನಿಗಮದ ಹೆಸರಿನಲ್ಲಿ ಸಂದೇಶವನ್ನು ಕಳುಹಿಸುವ ಮೂಲಕ ಅವರಿಗೆ ಕರೆ ಮಾಡುವಂತೆ ಸೂಚಿಸುತ್ತಿದ್ದಾರೆ, ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳಿಸುವಂತೆ ಎಚ್ಚರಿಸಿದ್ದಾರೆ.
ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಪಂಜಾಬ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಬಿಲ್ ಪಾವತಿಸುವಂತೆ ಮೆಸೇಜ್ ಹರಿದಾಡುತ್ತಿದೆ. “ಪ್ರಿಯ ಗ್ರಾಹಕರೇ, ನಿಮ್ಮ ಹಿಂದಿನ ತಿಂಗಳ ಬಿಲ್ ಅಪ್ಡೇಟ್ ಆಗದ ಕಾರಣ ಇಂದು ರಾತ್ರಿ 9.30 ಕ್ಕೆ ವಿದ್ಯುತ್ ಕಚೇರಿಯಿಂದ ನಿಮ್ಮ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ದಯವಿಟ್ಟು ತಕ್ಷಣವೇ ನಮ್ಮ ವಿದ್ಯುತ್ ಅಧಿಕಾರಿಯನ್ನು ಸಂಪರ್ಕಿಸಿ ಧನ್ಯವಾದಗಳು”, ಎಂದು ಒಂದು ಮೊಬೈಲ್ ಸಂಖ್ಯೆಯೊಂದಿಗೆ ಸಂದೇಶದಲ್ಲಿ ಬರೆಯಲಾಗಿರುತ್ತದೆ.
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…