ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್ಲೈನ್ ಮೂಲಕ ಮೆಸೇಜ್ ಕಳುಹಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.
ಮೊಬೈಲಿನಲ್ಲಿ ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್ಲೈನ್ ಮೂಲಕ ಸಂದೇಶ ರವಾನಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಸ್ಕಾಂ ಅಧಿಕಾರಿಗಳ ಹೆಸರಲ್ಲಿ ಮೋಸ ನಡೆಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಬೆಸ್ಕಾಂ ತನ್ನ ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ವಂಚಕರು ವಿದ್ಯುತ್ ನಿಗಮದ ಹೆಸರಿನಲ್ಲಿ ಸಂದೇಶವನ್ನು ಕಳುಹಿಸುವ ಮೂಲಕ ಅವರಿಗೆ ಕರೆ ಮಾಡುವಂತೆ ಸೂಚಿಸುತ್ತಿದ್ದಾರೆ, ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳಿಸುವಂತೆ ಎಚ್ಚರಿಸಿದ್ದಾರೆ.
ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಪಂಜಾಬ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಬಿಲ್ ಪಾವತಿಸುವಂತೆ ಮೆಸೇಜ್ ಹರಿದಾಡುತ್ತಿದೆ. “ಪ್ರಿಯ ಗ್ರಾಹಕರೇ, ನಿಮ್ಮ ಹಿಂದಿನ ತಿಂಗಳ ಬಿಲ್ ಅಪ್ಡೇಟ್ ಆಗದ ಕಾರಣ ಇಂದು ರಾತ್ರಿ 9.30 ಕ್ಕೆ ವಿದ್ಯುತ್ ಕಚೇರಿಯಿಂದ ನಿಮ್ಮ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ದಯವಿಟ್ಟು ತಕ್ಷಣವೇ ನಮ್ಮ ವಿದ್ಯುತ್ ಅಧಿಕಾರಿಯನ್ನು ಸಂಪರ್ಕಿಸಿ ಧನ್ಯವಾದಗಳು”, ಎಂದು ಒಂದು ಮೊಬೈಲ್ ಸಂಖ್ಯೆಯೊಂದಿಗೆ ಸಂದೇಶದಲ್ಲಿ ಬರೆಯಲಾಗಿರುತ್ತದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…