ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್ಲೈನ್ ಮೂಲಕ ಮೆಸೇಜ್ ಕಳುಹಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.
ಮೊಬೈಲಿನಲ್ಲಿ ವಿದ್ಯುತ್ ಬಿಲ್ ಬಾಕಿ ಇದೆ ಎಂದು ಆನ್ಲೈನ್ ಮೂಲಕ ಸಂದೇಶ ರವಾನಿಸಿ ದುಷ್ಕರ್ಮಿಗಳು ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಸ್ಕಾಂ ಅಧಿಕಾರಿಗಳ ಹೆಸರಲ್ಲಿ ಮೋಸ ನಡೆಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಬೆಸ್ಕಾಂ ತನ್ನ ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ವಂಚಕರು ವಿದ್ಯುತ್ ನಿಗಮದ ಹೆಸರಿನಲ್ಲಿ ಸಂದೇಶವನ್ನು ಕಳುಹಿಸುವ ಮೂಲಕ ಅವರಿಗೆ ಕರೆ ಮಾಡುವಂತೆ ಸೂಚಿಸುತ್ತಿದ್ದಾರೆ, ಇಲ್ಲದಿದ್ದಲ್ಲಿ ಸಂಪರ್ಕ ಕಡಿತಗೊಳಿಸುವಂತೆ ಎಚ್ಚರಿಸಿದ್ದಾರೆ.
ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಪಂಜಾಬ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಬಿಲ್ ಪಾವತಿಸುವಂತೆ ಮೆಸೇಜ್ ಹರಿದಾಡುತ್ತಿದೆ. “ಪ್ರಿಯ ಗ್ರಾಹಕರೇ, ನಿಮ್ಮ ಹಿಂದಿನ ತಿಂಗಳ ಬಿಲ್ ಅಪ್ಡೇಟ್ ಆಗದ ಕಾರಣ ಇಂದು ರಾತ್ರಿ 9.30 ಕ್ಕೆ ವಿದ್ಯುತ್ ಕಚೇರಿಯಿಂದ ನಿಮ್ಮ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ದಯವಿಟ್ಟು ತಕ್ಷಣವೇ ನಮ್ಮ ವಿದ್ಯುತ್ ಅಧಿಕಾರಿಯನ್ನು ಸಂಪರ್ಕಿಸಿ ಧನ್ಯವಾದಗಳು”, ಎಂದು ಒಂದು ಮೊಬೈಲ್ ಸಂಖ್ಯೆಯೊಂದಿಗೆ ಸಂದೇಶದಲ್ಲಿ ಬರೆಯಲಾಗಿರುತ್ತದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…