ಸರಕಾರಿ ಪದವಿ ಕಾಲೇಜಿಗಳಲ್ಲಿ ಖಾಲಿ ಇರುವ 1,250 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಲಿಖೀತ ಪರೀಕ್ಷೆ ಮುಗಿದಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಡಾ| ಅವಿನಾಶ್ ಉಮೇಶ್ ಜಾಧವ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು 6,500 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 5,000 ಹುದ್ದೆಗಳು ಭರ್ತಿಯಾಗಿವೆ. ಹೊಸದಾಗಿ 1,250 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಲಿಖೀತ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹುದ್ದೆಗಳನ್ನು ಭರ್ತಿ ಮಾಡಲು ನಮಗೆ ಹೆಚ್ಚುವರಿಯಾಗಿ 8,000 ಹುದ್ದೆಗಳು ಬೇಕಾಗುತ್ತದೆ. 12 ಸಾವಿರ ಅತಿಥಿ ಉಪನ್ಯಾಸಕರ ಮೂಲಕವೂ ಕೊರತೆ ಇರುವ ಕಡೆ ಪಾಠ ಪ್ರವಚನಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಎಲ್ಲೆಲ್ಲಿ ಹುದ್ದೆಗಳು ಖಾಲಿ ಇವೆಯೋ ಅಲ್ಲೆಲ್ಲ ಭರ್ತಿ ಮಾಡಬೇಕು. ಕೆಲವು ಕಾಲೇಜುಗಳಲ್ಲಿ 80-90ರಷ್ಟು ವಿದ್ಯಾರ್ಥಿಗಳಿಗೆ ಒಬ್ಬರೇ ಪ್ರಾಧ್ಯಾಪಕರಿದ್ದು, ಇಂತಹ ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ಸಲಹೆ ಮಾಡಿದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…
ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್ಎಸ್ ಎಲ್ಸಿ , ಪಿಯುಸಿ ಆದ…
ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…
ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…