ಸರಕಾರಿ ಪದವಿ ಕಾಲೇಜಿಗಳಲ್ಲಿ ಖಾಲಿ ಇರುವ 1,250 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಲಿಖೀತ ಪರೀಕ್ಷೆ ಮುಗಿದಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಡಾ| ಅವಿನಾಶ್ ಉಮೇಶ್ ಜಾಧವ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು 6,500 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 5,000 ಹುದ್ದೆಗಳು ಭರ್ತಿಯಾಗಿವೆ. ಹೊಸದಾಗಿ 1,250 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಲಿಖೀತ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹುದ್ದೆಗಳನ್ನು ಭರ್ತಿ ಮಾಡಲು ನಮಗೆ ಹೆಚ್ಚುವರಿಯಾಗಿ 8,000 ಹುದ್ದೆಗಳು ಬೇಕಾಗುತ್ತದೆ. 12 ಸಾವಿರ ಅತಿಥಿ ಉಪನ್ಯಾಸಕರ ಮೂಲಕವೂ ಕೊರತೆ ಇರುವ ಕಡೆ ಪಾಠ ಪ್ರವಚನಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಎಲ್ಲೆಲ್ಲಿ ಹುದ್ದೆಗಳು ಖಾಲಿ ಇವೆಯೋ ಅಲ್ಲೆಲ್ಲ ಭರ್ತಿ ಮಾಡಬೇಕು. ಕೆಲವು ಕಾಲೇಜುಗಳಲ್ಲಿ 80-90ರಷ್ಟು ವಿದ್ಯಾರ್ಥಿಗಳಿಗೆ ಒಬ್ಬರೇ ಪ್ರಾಧ್ಯಾಪಕರಿದ್ದು, ಇಂತಹ ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ಸಲಹೆ ಮಾಡಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…