ಸರಕಾರಿ ಪದವಿ ಕಾಲೇಜಿಗಳಲ್ಲಿ ಖಾಲಿ ಇರುವ 1,250 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಲಿಖೀತ ಪರೀಕ್ಷೆ ಮುಗಿದಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಡಾ| ಅವಿನಾಶ್ ಉಮೇಶ್ ಜಾಧವ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು 6,500 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 5,000 ಹುದ್ದೆಗಳು ಭರ್ತಿಯಾಗಿವೆ. ಹೊಸದಾಗಿ 1,250 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಲಿಖೀತ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹುದ್ದೆಗಳನ್ನು ಭರ್ತಿ ಮಾಡಲು ನಮಗೆ ಹೆಚ್ಚುವರಿಯಾಗಿ 8,000 ಹುದ್ದೆಗಳು ಬೇಕಾಗುತ್ತದೆ. 12 ಸಾವಿರ ಅತಿಥಿ ಉಪನ್ಯಾಸಕರ ಮೂಲಕವೂ ಕೊರತೆ ಇರುವ ಕಡೆ ಪಾಠ ಪ್ರವಚನಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಎಲ್ಲೆಲ್ಲಿ ಹುದ್ದೆಗಳು ಖಾಲಿ ಇವೆಯೋ ಅಲ್ಲೆಲ್ಲ ಭರ್ತಿ ಮಾಡಬೇಕು. ಕೆಲವು ಕಾಲೇಜುಗಳಲ್ಲಿ 80-90ರಷ್ಟು ವಿದ್ಯಾರ್ಥಿಗಳಿಗೆ ಒಬ್ಬರೇ ಪ್ರಾಧ್ಯಾಪಕರಿದ್ದು, ಇಂತಹ ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ಸಲಹೆ ಮಾಡಿದರು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…