ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮುಂದಿನ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ನೆಲೆಸುವಲ್ಲಿ ಜನಪ್ರತಿನಿಧಿಗಳು, ಧಾರ್ಮಿಕ ಪ್ರಮುಖರು ಸೇರಿದಂತೆ ಪ್ರತಿಯೊಬ್ಬರೂ ಸಹಕರಿಸಬೇಕು. ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ. ಕರಾವಳಿಯಲ್ಲಿ ಶಾಂತಿ ಕಾಪಾಡುವ ಅವಶ್ಯಕತೆ ಇದೆ. ಈ ಪ್ರದೇಶವು ಅಭಿವೃದ್ದಿ ಮತ್ತು ಬೆಳವಣಿಗೆಗೆ ಪೂರಕವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಕರಾವಳಿ ಅಭಿವೃದ್ದಿಗೆ ಒತ್ತು ನೀಡುತ್ತಿದೆ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಡ್ರಗ್ಸ್ ಮಾಫಿಯಾದ ವಿರುದ್ಧವೂ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಕರಾವಳಿ ಪ್ರದೇಶದಲ್ಲಿ ಸೇಡಿನ ಹತ್ಯೆಗಳು ಮತ್ತು ಇರಿತ ಪ್ರಕರಣಗಳು ಸೇರಿದಂತೆ ಹೆಚ್ಚುತ್ತಿರುವ ಕೋಮುಗಲಭೆಗೆ ಕಡಿವಾಣ ಹಾಕಲು ಗೃಹಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ವಿವಿಧ ಧಾರ್ಮಿಕ ಸಮುದಾಯಗಳ ನಾಯಕರೊಂದಿಗೆ ಶಾಂತಿಸಭೆ ನಡೆಸಿದ್ದಾರೆ.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…