ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮುಂದಿನ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ನೆಲೆಸುವಲ್ಲಿ ಜನಪ್ರತಿನಿಧಿಗಳು, ಧಾರ್ಮಿಕ ಪ್ರಮುಖರು ಸೇರಿದಂತೆ ಪ್ರತಿಯೊಬ್ಬರೂ ಸಹಕರಿಸಬೇಕು. ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ. ಕರಾವಳಿಯಲ್ಲಿ ಶಾಂತಿ ಕಾಪಾಡುವ ಅವಶ್ಯಕತೆ ಇದೆ. ಈ ಪ್ರದೇಶವು ಅಭಿವೃದ್ದಿ ಮತ್ತು ಬೆಳವಣಿಗೆಗೆ ಪೂರಕವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಕರಾವಳಿ ಅಭಿವೃದ್ದಿಗೆ ಒತ್ತು ನೀಡುತ್ತಿದೆ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಡ್ರಗ್ಸ್ ಮಾಫಿಯಾದ ವಿರುದ್ಧವೂ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಕರಾವಳಿ ಪ್ರದೇಶದಲ್ಲಿ ಸೇಡಿನ ಹತ್ಯೆಗಳು ಮತ್ತು ಇರಿತ ಪ್ರಕರಣಗಳು ಸೇರಿದಂತೆ ಹೆಚ್ಚುತ್ತಿರುವ ಕೋಮುಗಲಭೆಗೆ ಕಡಿವಾಣ ಹಾಕಲು ಗೃಹಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ವಿವಿಧ ಧಾರ್ಮಿಕ ಸಮುದಾಯಗಳ ನಾಯಕರೊಂದಿಗೆ ಶಾಂತಿಸಭೆ ನಡೆಸಿದ್ದಾರೆ.
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…