ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

May 5, 2025
12:02 PM

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಂಡು, ಅರಣ್ಯ ಭೂಮಿ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಶಿರಾ ತಾಲೂಕಿನ ಶೀಬಿ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಬೆಂಗಳೂರು-ಪುಣೆ ಹೆದ್ದಾರಿಯ ಪಕ್ಕದಲ್ಲೇ ಇರುವ ಈ ಅರಣ್ಯ ಭೂಮಿಗೆ ಭಾರೀ ಮೌಲ್ಯವಿದ್ದು, ಕೆಲವರು ಇದನ್ನು ಕಬಳಿಸಲು ಮತ್ತು ಒತ್ತುವರಿ ಮಾಡಲು ಯತ್ನಿಸುತ್ತಿದ್ದಾರೆ. ಹೀಗಾಗಿ ಅರಣ್ಯ ಸಿಬ್ಬಂದಿ ಕಟ್ಟೆಚ್ಚರದಿಂದ ಇರಬೇಕು ಎಂದು ನಿರ್ದೇಶನ ನೀಡಿದರು. ಕೆಲವರು ನ್ಯಾಯಾಲಯದಲ್ಲಿ ಭೂಮಿಯ ಮಾಲೀಕತ್ವದ ಹೋರಾಟ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ಡಿನೋಟಿಫಿಕೇಷನ್ ಆಗದ ಹೊರತು, ಅರಣ್ಯ ಭೂಮಿ ಅರಣ್ಯವಾಗಿಯೇ ಉಳಿಯುತ್ತದೆ. ಡಿನೋಟಿಫಿಕೇಷನ್ ಆಗದ ಈ ಅರಣ್ಯದಲ್ಲಿನ ಅಕ್ರಮ ಮಂಜೂರಾತಿ ರದ್ದುಪಡಿಸುವಂತೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾವೆ ಹೂಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಿರಾ ಶಾಸಕ ಟಿ.ಬಿ.ಜಯಚಂದ್ರ ಅವರೂ ಸಹ ಈ ಅರಣ್ಯ ಪ್ರದೇಶವನ್ನು ಸಂರಕ್ಷಿಸಲು ಬೇಲಿ ಹಾಕುವ ಬಗ್ಗೆ ಪ್ರಸ್ತಾವನೆ ನೀಡಿದ್ದು, ಈ ಅರಣ್ಯ ಪ್ರದೇಶವು ಭೂಮಾಫಿಯಾದ ಪಾಲಾಗದಂತೆ ಉಳಿಸಲು ಎಲ್ಲ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror